‘ನನ್ನ ಆರೋಗ್ಯದ ಬಗ್ಗೆ ಸುಳ್ಳು ಪ್ರಚಾರ ಮಾಡಿದರೆ ಬೇಸರ ಇಲ್ಲ, ಅವರಿಗೆ ತೃಪ್ತಿ ಸಿಗುವುದಾದರೆ ಅಪಪ್ರಚಾರ ಮಾಡಲಿ’ ಎಂದ ಅವರು, ‘ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನನ್ನ ಸಲಹೆ, ಸೂಚನೆ ಪಡೆದಿದ್ದೇವೆ ಎಂಬ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಹೇಳಿಕೆ ಸತ್ಯಕ್ಕೆ ದೂರವಾದುದು’ ಎಂದು ಸ್ಪಷ್ಟಪಡಿಸಿದರು.