<p><strong>ನವದೆಹಲಿ</strong>: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ನೂತನ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾದರು.</p>.<p>ನೆಹರೂ–ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಈ ಹುದ್ದೆಗೆ ಏರಿದ್ದಾರೆ. ಪಕ್ಷದಲ್ಲಿ ಜಗಜೀವನ ರಾಂ ಅವರ ನಂತರ ಮೊದಲ ಬಾರಿಗೆ ದಲಿತ ನಾಯಕ ರೊಬ್ಬರು ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ಅಧ್ಯಕ್ಷ ಸ್ಥಾನಕ್ಕೇರಿದ ಮೂರನೇ ದಲಿತ ನಾಯಕ ರಾಗಿದ್ದಾರೆ.</p>.<p>ಕರ್ನಾಟಕದಿಂದ ಎಸ್.ನಿಜಲಿಂಗಪ್ಪ ಅವರ ಬಳಿಕ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ತಮ್ಮ ಎದುರಾಳಿ ಶಶಿ ತರೂರ್ ಅವರನ್ನು 6,825 ಮತಗಳ ಭಾರಿ ಅಂತರದಿಂದ ಸೋಲಿಸಿ ವಿಜಯಶಾಲಿಯಾದರು.</p>.<p>ಅಕ್ಟೋಬರ್ 17ರಂದು ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಒಟ್ಟು 9,385 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ, ಖರ್ಗೆ ಅವರಿಗೆ ಶೇ 84.14 ರಷ್ಟು ಮತಗಳು ಬಿದ್ದಿವೆ. ಎದುರಾಳಿ ಶಶಿ ತರೂರ್ ಶೇ 11.42ರಷ್ಟು ಮತ ಗಳಿಸಿದ್ದಾರೆ. ಒಟ್ಟು 416 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ.</p>.<p>ಬೆಳಿಗ್ಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಖರ್ಗೆ ಅವರು ಮೊದಲಿನಿಂದಲೂ ಮುನ್ನಡೆಯಲ್ಲೇ ಇದ್ದರೂ, ತರೂರ್ ಗಳಿಸಿದ ಮತಗಳ ಸಂಖ್ಯೆ ಕೂಡ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ನೂತನ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾದರು.</p>.<p>ನೆಹರೂ–ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಈ ಹುದ್ದೆಗೆ ಏರಿದ್ದಾರೆ. ಪಕ್ಷದಲ್ಲಿ ಜಗಜೀವನ ರಾಂ ಅವರ ನಂತರ ಮೊದಲ ಬಾರಿಗೆ ದಲಿತ ನಾಯಕ ರೊಬ್ಬರು ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ಅಧ್ಯಕ್ಷ ಸ್ಥಾನಕ್ಕೇರಿದ ಮೂರನೇ ದಲಿತ ನಾಯಕ ರಾಗಿದ್ದಾರೆ.</p>.<p>ಕರ್ನಾಟಕದಿಂದ ಎಸ್.ನಿಜಲಿಂಗಪ್ಪ ಅವರ ಬಳಿಕ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ತಮ್ಮ ಎದುರಾಳಿ ಶಶಿ ತರೂರ್ ಅವರನ್ನು 6,825 ಮತಗಳ ಭಾರಿ ಅಂತರದಿಂದ ಸೋಲಿಸಿ ವಿಜಯಶಾಲಿಯಾದರು.</p>.<p>ಅಕ್ಟೋಬರ್ 17ರಂದು ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಒಟ್ಟು 9,385 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ, ಖರ್ಗೆ ಅವರಿಗೆ ಶೇ 84.14 ರಷ್ಟು ಮತಗಳು ಬಿದ್ದಿವೆ. ಎದುರಾಳಿ ಶಶಿ ತರೂರ್ ಶೇ 11.42ರಷ್ಟು ಮತ ಗಳಿಸಿದ್ದಾರೆ. ಒಟ್ಟು 416 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ.</p>.<p>ಬೆಳಿಗ್ಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಖರ್ಗೆ ಅವರು ಮೊದಲಿನಿಂದಲೂ ಮುನ್ನಡೆಯಲ್ಲೇ ಇದ್ದರೂ, ತರೂರ್ ಗಳಿಸಿದ ಮತಗಳ ಸಂಖ್ಯೆ ಕೂಡ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>