'2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ, ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ' ಎಂದು ಆರೋಪಿಸಿದ್ದರು.
'ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ' ಎಂದು ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳಾಗಿದ್ದಾರೆ.