<p><strong>ಬೆಂಗಳೂರು:</strong>ರೆಸಾರ್ಟ್ ರಾಜಕಾರಣದ ಮೂಲಕ ಸರ್ಕಾರ ಸುಭದ್ರಗೊಳಿಸಿಕೊಳ್ಳಲು ಕಸರತ್ತು ನಡೆಸಿರುವ ಮೈತ್ರಿ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್ ಇಂದು ಮತ್ತೆ ಎರಡನೇ ಬಾರಿಗೆ ಸಿಎಲ್ಪಿ ಸಭೆ ಕರೆದಿದೆ.</p>.<p>ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಸಿಎಲ್ಪಿ ಸಭೆ ಕರೆದಿದ್ದಾರೆ. ಎಲ್ಲಾ ಶಾಸಕರು ಸಭೆಗೆ ಹಾಜರಾಗುವಂತೆ ಸೂಚನೆಯನ್ನೂ ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.</p>.<p>ಬಿಜೆಪಿ ಶಾಸಕರು ಗುರುಗ್ರಾಮದ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದರು, ಕಾಂಗ್ರೆಸ್ನ ನಾಲ್ವರು ಶಾಸಕರು ಮುಂಬೈನಲ್ಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕೈ ಪಾಳಯದಲ್ಲಿ ತಳಮಳ ಉಂಟಾಗಿ ರೆಸಾರ್ಟ್ ಮೊರೆ ಹೋಗಿದ್ದರು. ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಮೂರು ದಿನಗಳಿಂದ ತಂಗಿದ್ದಾರೆ.</p>.<p>ಶನಿವಾರ ತಡರಾತ್ರಿ ಶಾಸಕರಾದ ಆನಂದ್ ಸಿಂಗ್ ಹಾಗೂ ಜೆ.ಎನ್. ಗಣೇಶ್ ಅವರ ನಡುವೆ ಹೊಡೆದಾಡಿಕೊಂಡಿದ್ದಾರೆ.</p>.<p>‘ಆಪರೇಷನ್ ಕಮಲ'ದ ಕುರಿತು ‘ಗೂಢಚರ್ಯೆ’ ನಡೆಸಿ ಕಾಂಗ್ರೆಸ್ನ ಹೈಕಮಾಂಡ್ ಎದುರು ಮಾಹಿತಿ ಸೋರಿಕೆಯಾದ ವಿಷಯ, ಆ ಪಕ್ಷದ ಶಾಸಕರಾದ ಆನಂದ್ ಸಿಂಗ್ ಹಾಗೂ ಜೆ.ಎನ್. ಗಣೇಶ್ ಅವರ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಿಂದ ‘ಕೈ’ ಪಾಳಯದ ನಾಯಕರು ಮುಜುಗರಕ್ಕೆ ಒಳಗಾಗುವಂತಾಗಿದೆ.</p>.<p>ಘಟನೆಯಲ್ಲಿ ಆನಂದ್ ಸಿಂಗ್ ಅವರ ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿದ್ದು, ಅವರನ್ನು ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/congress-leaders-fight-608924.html">‘ಆಪರೇಷನ್’ ಮಾಹಿತಿ ಸೋರಿಕೆಯಿಂದಾಗಿ ಹೊಯ್ಕೈ;ಆಸ್ಪತ್ರೆಗೆ ದಾಖಲಾದ ಆನಂದ್ ಸಿಂಗ್</a></strong></p>.<p><strong>*<a href="https://www.prajavani.net/stories/stateregional/angry-secrecy-disclose-608760.html">ಆನಂದ್ ಸಿಂಗ್ ಮೇಲೆ ಹಲ್ಲೆ; ಗುಟ್ಟು ರಟ್ಟು ಮಾಡಿದ್ದಕ್ಕೆ ಸಿಟ್ಟು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರೆಸಾರ್ಟ್ ರಾಜಕಾರಣದ ಮೂಲಕ ಸರ್ಕಾರ ಸುಭದ್ರಗೊಳಿಸಿಕೊಳ್ಳಲು ಕಸರತ್ತು ನಡೆಸಿರುವ ಮೈತ್ರಿ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್ ಇಂದು ಮತ್ತೆ ಎರಡನೇ ಬಾರಿಗೆ ಸಿಎಲ್ಪಿ ಸಭೆ ಕರೆದಿದೆ.</p>.<p>ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಸಿಎಲ್ಪಿ ಸಭೆ ಕರೆದಿದ್ದಾರೆ. ಎಲ್ಲಾ ಶಾಸಕರು ಸಭೆಗೆ ಹಾಜರಾಗುವಂತೆ ಸೂಚನೆಯನ್ನೂ ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.</p>.<p>ಬಿಜೆಪಿ ಶಾಸಕರು ಗುರುಗ್ರಾಮದ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದರು, ಕಾಂಗ್ರೆಸ್ನ ನಾಲ್ವರು ಶಾಸಕರು ಮುಂಬೈನಲ್ಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕೈ ಪಾಳಯದಲ್ಲಿ ತಳಮಳ ಉಂಟಾಗಿ ರೆಸಾರ್ಟ್ ಮೊರೆ ಹೋಗಿದ್ದರು. ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಮೂರು ದಿನಗಳಿಂದ ತಂಗಿದ್ದಾರೆ.</p>.<p>ಶನಿವಾರ ತಡರಾತ್ರಿ ಶಾಸಕರಾದ ಆನಂದ್ ಸಿಂಗ್ ಹಾಗೂ ಜೆ.ಎನ್. ಗಣೇಶ್ ಅವರ ನಡುವೆ ಹೊಡೆದಾಡಿಕೊಂಡಿದ್ದಾರೆ.</p>.<p>‘ಆಪರೇಷನ್ ಕಮಲ'ದ ಕುರಿತು ‘ಗೂಢಚರ್ಯೆ’ ನಡೆಸಿ ಕಾಂಗ್ರೆಸ್ನ ಹೈಕಮಾಂಡ್ ಎದುರು ಮಾಹಿತಿ ಸೋರಿಕೆಯಾದ ವಿಷಯ, ಆ ಪಕ್ಷದ ಶಾಸಕರಾದ ಆನಂದ್ ಸಿಂಗ್ ಹಾಗೂ ಜೆ.ಎನ್. ಗಣೇಶ್ ಅವರ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಿಂದ ‘ಕೈ’ ಪಾಳಯದ ನಾಯಕರು ಮುಜುಗರಕ್ಕೆ ಒಳಗಾಗುವಂತಾಗಿದೆ.</p>.<p>ಘಟನೆಯಲ್ಲಿ ಆನಂದ್ ಸಿಂಗ್ ಅವರ ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿದ್ದು, ಅವರನ್ನು ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/congress-leaders-fight-608924.html">‘ಆಪರೇಷನ್’ ಮಾಹಿತಿ ಸೋರಿಕೆಯಿಂದಾಗಿ ಹೊಯ್ಕೈ;ಆಸ್ಪತ್ರೆಗೆ ದಾಖಲಾದ ಆನಂದ್ ಸಿಂಗ್</a></strong></p>.<p><strong>*<a href="https://www.prajavani.net/stories/stateregional/angry-secrecy-disclose-608760.html">ಆನಂದ್ ಸಿಂಗ್ ಮೇಲೆ ಹಲ್ಲೆ; ಗುಟ್ಟು ರಟ್ಟು ಮಾಡಿದ್ದಕ್ಕೆ ಸಿಟ್ಟು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>