ಹುಬ್ಬಳ್ಳಿ: ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ 865 ಹಳ್ಳಿಗಳ ಜನರಿಗಾಗಿ ಮಹಾರಾಷ್ಟ್ರ ಸರ್ಕಾರವು ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುತ್ತಿರುವುದು ಅಕ್ಷಮ್ಯ. ಇದು ಒಕ್ಕೂಟದ ವ್ಯವಸ್ಥೆಗೆ, ರಾಜ್ಯದ ಸಾರ್ವಭೌಮತೆಗೆ ಧಕ್ಕೆ ತರುವಂತಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಯಮ್ಯ ಒತ್ತಾಯಿಸಿದರು.