ಕೊಪ್ಪಳ: ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ವಿಮಾನದಲ್ಲಿ ಬಂದರು.
ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ್ ಅವರ ಪುತ್ರಿಯ ವಿವಾಹ ಕಾರ್ಯಕ್ರಮ ಸೋಮವಾರ ಸಿಂಧನೂರಿನಲ್ಲಿ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಮೀಪದ ಬಸಾಪುರ ಖಾಸಗಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ಬೇರೆ ಬೇರೆಯಾಗಿ ಬಂದರು.
ಮೊದಲು ಸಿದ್ದರಾಮಯ್ಯ ಬಂದು ರಸ್ತೆ ಮಾರ್ಗದ ಮೂಲಕ ಸಿಂಧನೂರಿಗೆ ತೆರಳಿದರು. ಅರ್ಧ ಗಂಟೆ ಬಳಿಕ ಶಿವಕುಮಾರ್ ಬಂದರು. ನಾಯಕರು ಪ್ರತ್ಯೇಕವಾಗಿ ಬಂದಿದ್ದು ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ಹುಟ್ಟು ಹಾಕಿದೆ.