ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೆಡೆ ಗಾಳಿಸುದ್ದಿ ಹರಡಿದರೆ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ದೆಹಲಿಯಲ್ಲಿ ಕುಳಿತು ಏನೇನೋ ಮಾತನಾಡುತ್ತಾರೆ. ₹7 ಸಾವಿರ ಕೋಟಿ ಹಗರಣ ನಡೆದಿದ್ದರೆ, ಹಣ ಕಳೆದುಕೊಂಡವರು ಯಾರು? ಯಾವ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಸವಾಲೆಸೆದರು.