ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ..