‘ರಾಹುಲ್ ಗಾಂಧಿ ಅವರು ದೇಶದ ಬಡವರ ಧ್ವನಿಯಾಗಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಬಿಜೆಪಿಯವರು ಮುಂದಾಗಿದ್ದಾರೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಸ್ಥಾಪನೆಗೆ ಭಾರತ ಒಗ್ಗೂಡಿಸಲು ಮುಂದಾಗಿರುವ ನಮ್ಮ ನಾಯಕನ ವಿರುದ್ಧ ಬಿಜೆಪಿ ಸಂಚು ರೂಪಿಸುತ್ತಿದೆ. ಆದರೆ, ರಾಹುಲ್ ಗಾಂಧಿ ಅವರ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಜನ ಸೂಕ್ತ ಉತ್ತರ ನೀಡುತ್ತಾರೆ. ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿಭಾಗೀಯ ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸುವಂತೆ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದೇನೆ’ ಎಂದರು.