ಎಐಸಿಸಿ ಮತ್ತು ಕೆಪಿಸಿಸಿಯಿಂದ ನಡೆಸಿರುವ ಸಮೀಕ್ಷೆ, ಸಿದ್ದರಾಮಯ್ಯ ಅವರು ಮಾಡಿಸಿರುವ ಸಮೀಕ್ಷೆ, ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವರು ನೀಡಿರುವ ಅಭಿಪ್ರಾಯ, ಟಿಕೆಟ್ ಆಕಾಂಕ್ಷಿಗಳ ಹೆಸರಿನ ಮೇಲೆ ನಡೆದ ಸಮೀಕ್ಷೆಯ ಈ ಎಲ್ಲ ವಿಷಯಗಳನ್ನು ಮುಂದಿಟ್ಟು ನಾಯಕರು ಚರ್ಚೆ ನಡೆಸಿದ್ದಾರೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಈ ಸಭೆಯಲ್ಲಿ ಅಂತಿಮಗೊಳಿಸಿ, ಹೈಕಮಾಂಡ್ಗೆ ಶಿಫಾರಸು ಮಾಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.