ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟ ಸೋಲು ಅನುಭವಿಸಿರುವ ಹೊತ್ತಿನಲ್ಲಿ, ಸರ್ಕಾರ ಅಸ್ಥಿರದ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಈ ಇಬ್ಬರೂ ಶಾಸಕರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿರುವುದರ ಹಿಂದೆ ರಾಜಕೀಯ ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಆದರೆ, ಈ ವಾದವನ್ನು ರಮೇಶ್ ಮತ್ತು ಸುಧಾಕರ್ ನಿರಾಕರಿಸಿದ್ದಾರೆ.