<p><strong>ಬೆಂಗಳೂರು</strong>: ‘ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಅನುಸರಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆಯ ಮುಕ್ತಾಯದ ಬಳಿಕ ನಡೆದ ಸುದ್ದಿಗೋಷ್ಠಿಯ ವೇಳೆ ಎದುರಾದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದ್ದು ಹೀಗೆ.</p><p>‘ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ವದಂತಿ ಜೋರಾಗಿದೆಯಲ್ಲವೇ?’ ಎಂದು ಸುದ್ದಿಗಾರರು ಕೇಳಿದಾಗ, ‘ಈ ಪ್ರಶ್ನೆ ಇಲ್ಲಿ ಅಪ್ರಸ್ತುತ. ಈ ಸಭೆಗೆ ಸಂಬಂಧಿಸಿದ್ದಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.</p><p>‘ನೀವು ಕೇಳುವ ಪ್ರಶ್ನೆಯ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಪಾಲಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಅನುಸರಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆಯ ಮುಕ್ತಾಯದ ಬಳಿಕ ನಡೆದ ಸುದ್ದಿಗೋಷ್ಠಿಯ ವೇಳೆ ಎದುರಾದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದ್ದು ಹೀಗೆ.</p><p>‘ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ವದಂತಿ ಜೋರಾಗಿದೆಯಲ್ಲವೇ?’ ಎಂದು ಸುದ್ದಿಗಾರರು ಕೇಳಿದಾಗ, ‘ಈ ಪ್ರಶ್ನೆ ಇಲ್ಲಿ ಅಪ್ರಸ್ತುತ. ಈ ಸಭೆಗೆ ಸಂಬಂಧಿಸಿದ್ದಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.</p><p>‘ನೀವು ಕೇಳುವ ಪ್ರಶ್ನೆಯ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಪಾಲಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>