<p><strong>ಮೈಸೂರು</strong>: ‘ನಾಯಕತ್ವ ಬದಲಾವಣೆ ಕುರಿತು ಪಕ್ಷದ ನಾಯಕ ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಈ ಕುರಿತು ಪಕ್ಷದ ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು’ ಎಂದು ಹೇಳಿದರು. </p>.<p>‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ. ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ. ಸಮಸ್ಯೆ ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದರು.</p>.<p>ಮಾಜಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ‘ಪಕ್ಷದ ಅಧ್ಯಕ್ಷರನ್ನು ಯಾರಾದರೂ ಭೇಟಿಯಾದರೆ ತಪ್ಪೇನು? ಭೇಟಿಯಾಗಲಿ’ ಎಂದರು.</p>.<p>‘ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ’ ಎಂಬ ಶಿವಕುಮಾರ್ ಹೇಳಿಕೆಗೆ, ‘ಅಧಿಕಾರದಲ್ಲಿ ಇದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿ ಆಗಿದ್ದರು, ಸರ್ಕಾರ ಮಾಡಿತ್ತು’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜ್ಯ ಬಜೆಟ್ ಸಿದ್ಧತೆ ನಡೆದಿದೆಯೇ’ ಎಂಬ ಪ್ರಶ್ನೆಗೆ, ‘ತಯಾರಿ ನಡೆಸುವಾಗ ನಿಮಗೆ ತಿಳಿಸುವೆ’ ಎಂದು ಹೇಳಿದರು.</p>.<div><blockquote>ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲೇ ಹೆಚ್ಚು ಚರ್ಚೆಯಾಗುತ್ತಿದೆ. ಆ ಬಗ್ಗೆ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿಯೇ ಹೇಳಿದ ಮೇಲೂ ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನಾಯಕತ್ವ ಬದಲಾವಣೆ ಕುರಿತು ಪಕ್ಷದ ನಾಯಕ ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಈ ಕುರಿತು ಪಕ್ಷದ ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು’ ಎಂದು ಹೇಳಿದರು. </p>.<p>‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ. ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ. ಸಮಸ್ಯೆ ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದರು.</p>.<p>ಮಾಜಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ‘ಪಕ್ಷದ ಅಧ್ಯಕ್ಷರನ್ನು ಯಾರಾದರೂ ಭೇಟಿಯಾದರೆ ತಪ್ಪೇನು? ಭೇಟಿಯಾಗಲಿ’ ಎಂದರು.</p>.<p>‘ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ’ ಎಂಬ ಶಿವಕುಮಾರ್ ಹೇಳಿಕೆಗೆ, ‘ಅಧಿಕಾರದಲ್ಲಿ ಇದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿ ಆಗಿದ್ದರು, ಸರ್ಕಾರ ಮಾಡಿತ್ತು’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜ್ಯ ಬಜೆಟ್ ಸಿದ್ಧತೆ ನಡೆದಿದೆಯೇ’ ಎಂಬ ಪ್ರಶ್ನೆಗೆ, ‘ತಯಾರಿ ನಡೆಸುವಾಗ ನಿಮಗೆ ತಿಳಿಸುವೆ’ ಎಂದು ಹೇಳಿದರು.</p>.<div><blockquote>ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲೇ ಹೆಚ್ಚು ಚರ್ಚೆಯಾಗುತ್ತಿದೆ. ಆ ಬಗ್ಗೆ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿಯೇ ಹೇಳಿದ ಮೇಲೂ ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>