<p><strong>ನವದೆಹಲಿ/ ಬೆಂಗಳೂರು:</strong> ಆಡಳಿತರೂಢ ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲ ತಾರಕಕ್ಕೇರಿರುವ ನಡುವೆ, ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿದ ಬಿ.ಕೆ. ಹರಿಪ್ರಸಾದ್ ಅವರು 10 ನಿಮಿಷ ಚರ್ಚೆ ನಡೆಸಿದ್ದಾರೆ.</p>.<p>ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹರಿಯಾಣ ರಾಜ್ಯದ ಎಐಸಿಸಿ ಉಸ್ತುವಾರಿಯಾಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಡುವೆ ನಾಯಕತ್ವಕ್ಕಾಗಿನ ಕಚ್ಚಾಟ ತೀವ್ರವಾಗಿದ್ದು, ಶಾಸಕರ ಬಲ ಕ್ರೋಡೀಕರಣದ ಯತ್ನಗಳು ನಡೆಯುತ್ತಿವೆ. ಈ ಬೆಳವಣಿಗೆಗಳ ಮಧ್ಯೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಅವರನ್ನು ಹರಿಪ್ರಸಾದ್ ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಮೂರು ದಿನಗಳಿಂದ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ನ. 25) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು, ಶಾಸಕರ ಜೊತೆ ಮಾತುಕತೆ ನಡೆಸಿರುವ ಖರ್ಗೆ, ಈ ವಿಚಾರವನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಇದೇ ವಾರಾಂತ್ಯದಲ್ಲಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ ಬೆಂಗಳೂರು:</strong> ಆಡಳಿತರೂಢ ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲ ತಾರಕಕ್ಕೇರಿರುವ ನಡುವೆ, ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿದ ಬಿ.ಕೆ. ಹರಿಪ್ರಸಾದ್ ಅವರು 10 ನಿಮಿಷ ಚರ್ಚೆ ನಡೆಸಿದ್ದಾರೆ.</p>.<p>ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹರಿಯಾಣ ರಾಜ್ಯದ ಎಐಸಿಸಿ ಉಸ್ತುವಾರಿಯಾಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಡುವೆ ನಾಯಕತ್ವಕ್ಕಾಗಿನ ಕಚ್ಚಾಟ ತೀವ್ರವಾಗಿದ್ದು, ಶಾಸಕರ ಬಲ ಕ್ರೋಡೀಕರಣದ ಯತ್ನಗಳು ನಡೆಯುತ್ತಿವೆ. ಈ ಬೆಳವಣಿಗೆಗಳ ಮಧ್ಯೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಅವರನ್ನು ಹರಿಪ್ರಸಾದ್ ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಮೂರು ದಿನಗಳಿಂದ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ನ. 25) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು, ಶಾಸಕರ ಜೊತೆ ಮಾತುಕತೆ ನಡೆಸಿರುವ ಖರ್ಗೆ, ಈ ವಿಚಾರವನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಇದೇ ವಾರಾಂತ್ಯದಲ್ಲಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>