<p><strong>ಹುಬ್ಬಳ್ಳಿ</strong>; 'ಮುಖ್ಯಮಂತ್ರಿ ಬದಲಾಯಿಸಬೇಕೋ, ಬೇಡವೋ ಎನ್ನುವುದು ಹೈಕಮಾಂಡ್ಗೆ ಬಿಟ್ಟ ನಿರ್ಧಾರ. ಆ ಕುರಿತು ಅವರೇ ಮಾತನಾಡುತ್ತಿಲ್ಲ ಎಂದಾಗ, ನಾವು-ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p><p>ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಅವರು ಯಾರೊಂದಿಗೂ ಚರ್ಚಿಸಿಲ್ಲ. ಸಿಎಂ ಬದಲಾಯಿಸುವ ಅಧಿಕಾರ ಇರುವ ಪಕ್ಷದ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಆ ಕುರಿತು ಚರ್ಚಿಸುವುದು ಅಪ್ರಸ್ತುತ' ಎಂದರು.</p><p>'ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಸಹ ಯಾವ ಚರ್ಚೆಗಳು ನಡೆದಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನವಾಗಿದೆ' ಎಂದು ಹೇಳಿದರು.</p><p>'ನಾಯಕ ರಾಹುಲ್ ಗಾಂಧಿ ಅವರು ಬಿಹಾರ ಪ್ರವಾಸದಲ್ಲಿ ಇದ್ದ ಕಾರಣ, ಸಿಎಂ ಮತ್ತು ಡಿಸಿಎಂ ಅವರಿಗೆ ದೆಹಲಿಯಲ್ಲಿ ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕಾರಣದಿಂದ ರಾಜ್ಯ ನಾಯಕರು ವೀಕ್ ಆಗಿದ್ದಾರೆ ಎನ್ನಲು ಸಾಧ್ಯವಿಲ್ಲ' ಎಂದು ಸಚಿವ ಪ್ರಿಯಾಂಕ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>; 'ಮುಖ್ಯಮಂತ್ರಿ ಬದಲಾಯಿಸಬೇಕೋ, ಬೇಡವೋ ಎನ್ನುವುದು ಹೈಕಮಾಂಡ್ಗೆ ಬಿಟ್ಟ ನಿರ್ಧಾರ. ಆ ಕುರಿತು ಅವರೇ ಮಾತನಾಡುತ್ತಿಲ್ಲ ಎಂದಾಗ, ನಾವು-ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p><p>ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಅವರು ಯಾರೊಂದಿಗೂ ಚರ್ಚಿಸಿಲ್ಲ. ಸಿಎಂ ಬದಲಾಯಿಸುವ ಅಧಿಕಾರ ಇರುವ ಪಕ್ಷದ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಆ ಕುರಿತು ಚರ್ಚಿಸುವುದು ಅಪ್ರಸ್ತುತ' ಎಂದರು.</p><p>'ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಸಹ ಯಾವ ಚರ್ಚೆಗಳು ನಡೆದಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನವಾಗಿದೆ' ಎಂದು ಹೇಳಿದರು.</p><p>'ನಾಯಕ ರಾಹುಲ್ ಗಾಂಧಿ ಅವರು ಬಿಹಾರ ಪ್ರವಾಸದಲ್ಲಿ ಇದ್ದ ಕಾರಣ, ಸಿಎಂ ಮತ್ತು ಡಿಸಿಎಂ ಅವರಿಗೆ ದೆಹಲಿಯಲ್ಲಿ ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕಾರಣದಿಂದ ರಾಜ್ಯ ನಾಯಕರು ವೀಕ್ ಆಗಿದ್ದಾರೆ ಎನ್ನಲು ಸಾಧ್ಯವಿಲ್ಲ' ಎಂದು ಸಚಿವ ಪ್ರಿಯಾಂಕ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>