ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT
ADVERTISEMENT

Karnataka Politics: ಕಾಂಗ್ರೆಸ್‌ನಲ್ಲೀಗ ‘ಉತ್ತರಾಧಿಕಾರಿ ಪರ್ವ’

Published : 23 ಅಕ್ಟೋಬರ್ 2025, 23:30 IST
Last Updated : 23 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
‘ಘೋಷಿಸಲು ಯತೀಂದ್ರ ಯಾರು?’
ಹುಬ್ಬಳ್ಳಿ: ‘ಮುಂದಿನ ಮುಖ್ಯಮಂತ್ರಿ ಕುರಿತು ಹೇಳಿಕೆ ನೀಡಲು ಡಾ.ಯತೀಂದ್ರ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಅವರೊಬ್ಬ ವಿಧಾನ ಪರಿಷತ್‌ ಸದಸ್ಯ ಅಷ್ಟೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಸಿದ್ದರಾಮಯ್ಯ ಅವರ ನಂತರ ನಾಯಕತ್ವ ವಹಿಸಿಕೊಳ್ಳಲು ಸತೀಶ ಜಾರಕಿಹೊಳಿ ಸಮರ್ಥರು ಎಂದು ಡಾ. ಯತೀಂದ್ರ ಹೇಳಿರು ವುದಕ್ಕೆ ಗುರುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಎಲ್ಲವನ್ನೂ ಡಾ. ಯತೀಂದ್ರ ಹೇಳುವುದಾದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕಥೆ ಏನಾಗಬೇಕು? ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ತುಲಾಭಾರ ಸೇವೆ ಸಲ್ಲಿಸುತ್ತಿದ್ದಾರೆ. ನವೆಂಬರ್‌ ಕ್ರಾಂತಿ ವಿಷಯದ ಚರ್ಚೆಯೂ ಸಿದ್ದರಾಮಯ್ಯ ಅವರ ಮನೆಯಲ್ಲೇ ನಡೆದಿದೆ’ ಎಂದರು.
ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ: ಡಿಕೆಶಿ
‘ಈ ವಿಚಾರವಾಗಿ ಈ ಸಂದರ್ಭದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. ‘ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುವ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತುಕ್ರಮ ಯತೀಂದ್ರ ವಿಷಯದಲ್ಲಿ ಯಾಕೆ ಇಲ್ಲ’ ಎಂಬ ಸುದ್ದಿಗಾರರ ಪ್ರಶ್ನೆಗೆ ‘ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT