ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದು ಮನುಷ್ಯಾಕೃತಿಯೂ BJPಯಲ್ಲಿಲ್ಲ: ಕಾಂಗ್ರೆಸ್‌

Published 26 ಜೂನ್ 2023, 9:04 IST
Last Updated 26 ಜೂನ್ 2023, 9:04 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಲೇವಡಿ ಮಾಡಿದೆ.

ಮಾಜಿ ಸಚಿವ ಅಶ್ವತ್ಥನಾರಾಯಣಗೆ ಸದಾ ಗಂಡಸ್ತನದ ಬಗ್ಗೆಯೇ ಚಿಂತೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರತಾಪ್‌ ಸಿಂಹನನ್ನೇ ಎದುರಿಸಲಾಗುತ್ತಿಲ್ಲ. ಇನ್ನು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ ಎಂದು ಕಾಂಗ್ರೆಸ್‌ ಕುಹಕವಾಡಿದೆ.

ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಹೀಗಿದೆ;

‘ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ. ಬಸನಗೌಡ ಪಾಟೀಲ್‌ ಯತ್ಮಾಳ ಬಾಯಿ ತೆರೆದರೆ ಹೊಲಸು ಮಾತುಗಳು. ಆರ್. ಅಶೋಕ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಅಶ್ವತ್ಥನಾರಾಯಣಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಬಸವರಾಜ ಬೊಮ್ಮಾಯಿ, ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT