ಬೆಂಗಳೂರು: ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಅಲ್ಲದೆ ಬಂಧನದಿಂದ ಹೊರಬರಬೇಕು ಎಂದರೆ ಆ ‘ಪಂಚೆ‘ಯನ್ನು ಹರಿಯಲೇಬೇಕು ಎಂದು ಕುಹಕವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ. ಬಂಧನದಿಂದ ಹೊರಬರಬೇಕು ಎಂದರೆ ಆ ಪಂಚೆಯನ್ನು ಹರಿಯಲೇಬೇಕು. ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು‘ ಎಂದು ಕಾಂಗ್ರೆಸ್ ಹೇಳಿದೆ.