ಪತ್ರದಲ್ಲಿ ಏನಿದೆ?
ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸಲು ಸಾಧ್ಯವಾಗುತ್ತಿಲ್ಲ. ನಾವು ಸ್ಥಳೀಯ ಶಾಸಕರಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರದ ಸಂಗತಿ. ಅಲ್ಲದೆ, ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸಚಿವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು.