‘ಭದ್ರಾ ಮೇಲ್ದಂಡೆ ಯೋಜನೆಯನ್ವಯ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿ, ಹಣ ಮೀಸಲಿಟ್ಟಿದೆ. ಆದರೆ, ಈಗ ಈ ಯೋಜನೆಗೆ ಬೇರೆ ಯೋಜನೆಯಡಿ ಹಣ ನೀಡಲು ಮುಂದಾಗಿದೆ. ಯೋಜನೆಯನ್ನು ಕೇಂದ್ರ ಸರ್ಕಾರ ಯಾವುದೇ ಮಾನದಂಡದಲ್ಲಿ ಗುರುತಿಸಲಿ. ಆದರೆ, ಯಾವುದೇ ಕಗ್ಗಂಟಿಲ್ಲದೆ ಹಣ ಬಿಡುಗಡೆ ಮಾಡಲಿ’ ಎಂದು ಆಗ್ರಹಿಸಿದ ಜಯಚಂದ್ರ, ಈ ಯೋಜನೆಗೆ ರಾಜ್ಯ ಸರ್ಕಾರ ₹ 20 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ ಎಂದರು.