ನಗರದ ಸರ್ಕ್ಯೂಟ್ ಹವಸ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸಿತ್ತು. ಈಗ ಹೀನಾಯವಾಗಿ ಸೋತಿದೆ. ಕಳೆದ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರು. ಈ ಚುನಾವಣೆಯಲ್ಲಿ ಹಿಂದೂಗಳ ಮತಗಳು ಎಲ್ಲಿ ಹೋದವು ಎಂಬುದನ್ನು ಕಾಂಗ್ರೆಸ್ ತಿಳಿಯಬೇಕು' ಎಂದರು.