ಬನ್ನೇರುಘಟ್ಟದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ನಾವು ಬಿಜೆಪಿಯವರಂತೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ, ಎಲ್ಲರ ಖಾತೆಗೆ ₹ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಇಮ್ಮಡಿ ಮಾಡುತ್ತೇವೆಂದು ಸುಳ್ಳು ಹೇಳಿಲ್ಲ. ನಾವು ಕೊಟ್ಟ ಮಾತಿನಂತೆ ನಡೆದು, ಬಡವರಿಗೆ ನೆರವಾಗಿ ಪ್ರತಿ ತಿಂಗಳು ₹ 5 ಸಾವಿರದಷ್ಟು ಉಳಿತಾಯವಾಗುವಂತೆ ಮಾಡಿದ್ದೇವೆ. ಆ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ’ ಎಂದರು.