ಬೆಂಗಳೂರು: ‘ನಾವು ಏಕೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋದೆವು ಎಂಬುದನ್ನು ಒಂದು ಗಂಟೆ ಕಾಲ ಚರ್ಚೆ ಮಾಡಲು ಅವಕಾಶ ನೀಡಿದರೆ ಚರ್ಚಿಸಬಹುದು’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ವಿಧಾನ ಪರಿಷತ್ನಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನೇ ಉಲ್ಲೇಖಿಸಿ, ಸಾರ್ವಜನಿಕ ಮಹತ್ವದ ವಿಷಯವೆಂದು ನಿಯಮ 58ರ ಅಡಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಕಾಂಗ್ರೆಸ್ ಪತ್ರ ನೀಡಿದೆ.