<p><strong>ಬೆಂಗಳೂರು</strong>: ‘ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಿಸುವ ವಿಚಾರದಲ್ಲಿ ಸಚಿವರು, ಸಂಸದರು, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಸಿಲ್ಲ ಎಂದು ವರದಿ ನೀಡುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಆ ವರದಿಯನ್ನು ಕಳುಹಿಸಿದ ನಂತರ ಶಂಕುಸ್ಥಾಪನೆಗೆ ದಿನ ನಿಗದಿ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಬಳಿಕ ಅವರು ಮಾತನಾಡಿದರು.</p>.<p>‘ರಾಜ್ಯಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡುವ ಬಗ್ಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ’ ಎಂದೂ ಹೇಳಿದರು.</p>.<p><strong>8-10 ದಿನಗಳಲ್ಲಿ ಆಯ್ಕೆ</strong>: ‘ಪದವೀಧರ ಹಾಗೂ ಶಿಕ್ಷಕರ ಪ್ರತಿ ಕ್ಷೇತ್ರದಿಂದ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಪಡೆಯುತ್ತೇವೆ’ ಎಂದು ಶಿವಕುಮಾರ್ ತಿಳಿಸಿದರು.</p>.<p><strong>ಶ್ರೀರಾಮುಲು ಕೊಟ್ಟ ಹಣ ಬಿಹಾರಕ್ಕೆ</strong>: ‘ಬಿಹಾರ ಚುನಾವಣೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ₹ 300 ಕೋಟಿ ಕಪ್ಪ ಕಾಣಿಕೆ ನೀಡಿದ್ದಾರೆ’ ಎಂಬ ಬಿಜೆಪಿಯ ಬಿ. ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ’ ಎಂದು ವ್ಯಂಗ್ಯವಾಡಿದರು.</p>.<p>ನಾಯಕತ್ವ ಬದಲಾವಣೆ, ದಲಿತ ಮುಖ್ಯಮಂತ್ರಿ, ಸಂಪುಟ ಪುನರ್ ರಚನೆ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, ‘ಅನಗತ್ಯ ಮಾತನಾಡಿ ದಣಿವಾಗುವುದು ಬೇಡವೆಂದು ಮನವಿ ಮಾಡುತ್ತೇನೆ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಿಸುವ ವಿಚಾರದಲ್ಲಿ ಸಚಿವರು, ಸಂಸದರು, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಸಿಲ್ಲ ಎಂದು ವರದಿ ನೀಡುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಆ ವರದಿಯನ್ನು ಕಳುಹಿಸಿದ ನಂತರ ಶಂಕುಸ್ಥಾಪನೆಗೆ ದಿನ ನಿಗದಿ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಬಳಿಕ ಅವರು ಮಾತನಾಡಿದರು.</p>.<p>‘ರಾಜ್ಯಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡುವ ಬಗ್ಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ’ ಎಂದೂ ಹೇಳಿದರು.</p>.<p><strong>8-10 ದಿನಗಳಲ್ಲಿ ಆಯ್ಕೆ</strong>: ‘ಪದವೀಧರ ಹಾಗೂ ಶಿಕ್ಷಕರ ಪ್ರತಿ ಕ್ಷೇತ್ರದಿಂದ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಪಡೆಯುತ್ತೇವೆ’ ಎಂದು ಶಿವಕುಮಾರ್ ತಿಳಿಸಿದರು.</p>.<p><strong>ಶ್ರೀರಾಮುಲು ಕೊಟ್ಟ ಹಣ ಬಿಹಾರಕ್ಕೆ</strong>: ‘ಬಿಹಾರ ಚುನಾವಣೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ₹ 300 ಕೋಟಿ ಕಪ್ಪ ಕಾಣಿಕೆ ನೀಡಿದ್ದಾರೆ’ ಎಂಬ ಬಿಜೆಪಿಯ ಬಿ. ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ’ ಎಂದು ವ್ಯಂಗ್ಯವಾಡಿದರು.</p>.<p>ನಾಯಕತ್ವ ಬದಲಾವಣೆ, ದಲಿತ ಮುಖ್ಯಮಂತ್ರಿ, ಸಂಪುಟ ಪುನರ್ ರಚನೆ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, ‘ಅನಗತ್ಯ ಮಾತನಾಡಿ ದಣಿವಾಗುವುದು ಬೇಡವೆಂದು ಮನವಿ ಮಾಡುತ್ತೇನೆ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>