<p><strong>ಬೆಂಗಳೂರು</strong>: ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಚಿವರು, ಶಾಸಕರಿಗೆ ಪಾಕಿಸ್ತಾನದ ಮೇಲೇಕೆ ಇಷ್ಟು ಪ್ರೀತಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಾಕಿಸ್ತಾನದಲ್ಲಿ ಭಾರತೀಯ ಸೇನೆ ದಾಳಿ ನಡೆಸಿದೆ ಎಂಬುದನ್ನು ಆ ದೇಶವೇ ಹೇಳಿಕೊಂಡಿದೆ. ಉಗ್ರ ಅಜರ್ ಮಸೂದ್ ಅವರ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ಪರಿಹಾರ ನೀಡಿದೆ. ಅಂಥದ್ದರಲ್ಲಿ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಸೇನಾ ಕಾರ್ಯಾಚರಣೆಗೆ ಸಾಕ್ಷ್ಯ ಕೇಳುತ್ತಿದ್ದಾರೆ’ ಎಂದರು.</p>.<p>‘ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಕೋಲಾರ ಶಾಸಕ ಮಂಜುನಾಥ್ ಅವರು ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದ್ದಾರೆ. ಭಯೋತ್ಪಾದಕರ ಗುಂಡಿಗೆ ಬಲಿಯಾದ ಸಾಮಾನ್ಯ ಜನರು, ಸೇನಾ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರ ಜೀವಗಳಿಗೆ ಇವರು ಬೆಲೆ ನೀಡುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಇವರಿಗೆಲ್ಲಾ ಪಾಕಿಸ್ತಾನದ ಮೇಲೆ ಏಕೆ ಇಷ್ಟು ಪ್ರೀತಿ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಚಿವರು, ಶಾಸಕರಿಗೆ ಪಾಕಿಸ್ತಾನದ ಮೇಲೇಕೆ ಇಷ್ಟು ಪ್ರೀತಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಾಕಿಸ್ತಾನದಲ್ಲಿ ಭಾರತೀಯ ಸೇನೆ ದಾಳಿ ನಡೆಸಿದೆ ಎಂಬುದನ್ನು ಆ ದೇಶವೇ ಹೇಳಿಕೊಂಡಿದೆ. ಉಗ್ರ ಅಜರ್ ಮಸೂದ್ ಅವರ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ಪರಿಹಾರ ನೀಡಿದೆ. ಅಂಥದ್ದರಲ್ಲಿ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಸೇನಾ ಕಾರ್ಯಾಚರಣೆಗೆ ಸಾಕ್ಷ್ಯ ಕೇಳುತ್ತಿದ್ದಾರೆ’ ಎಂದರು.</p>.<p>‘ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಕೋಲಾರ ಶಾಸಕ ಮಂಜುನಾಥ್ ಅವರು ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದ್ದಾರೆ. ಭಯೋತ್ಪಾದಕರ ಗುಂಡಿಗೆ ಬಲಿಯಾದ ಸಾಮಾನ್ಯ ಜನರು, ಸೇನಾ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರ ಜೀವಗಳಿಗೆ ಇವರು ಬೆಲೆ ನೀಡುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಇವರಿಗೆಲ್ಲಾ ಪಾಕಿಸ್ತಾನದ ಮೇಲೆ ಏಕೆ ಇಷ್ಟು ಪ್ರೀತಿ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>