ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್ ಖರೀದಿ ತನಿಖೆಗೆ ಆಗ್ರಹ: ಕಾಂಗ್ರೆಸ್ ಜಾಥಾ, ಪ್ರತಿಭಟನೆ

Last Updated 11 ಸೆಪ್ಟೆಂಬರ್ 2018, 7:47 IST
ಅಕ್ಷರ ಗಾತ್ರ

ಮಂಗಳೂರು: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಬದಲಾವಣೆಯಲ್ಲಿ ಸಾವಿರಾರು ಕೋಟಿ‌ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ, ಈ ಕುರಿತು ತನಿಖೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಜಾಥಾ ಮತ್ತು ಪ್ರತಿಭಟನೆ ನಡೆಸಿತು.

ಡಾ.ಬಿ.ಆರ್.ಅಂಬೇಡ್ಕರ್ ‌ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿ ಕಚೇರಿ‌ ಎದುರು ತಲುಪಿದೆ. ಪ್ರತಿಭಟನಾ ಸಭೆ ಆರಂಭವಾಗಿದ್ದು, ಕೇಂದ್ರದ ಎನ್ ಡಿಎ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ‌ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಮೇಯರ್ ಭಾಸ್ಕರ್, ಮಾಜಿ ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT