<p><strong>ಬೆಂಗಳೂರು:</strong> 'ಕೇಂದ್ರದ ಬಿಜೆಪಿ ಸರ್ಕಾರ ಮತ ಕಳ್ಳತನದಲ್ಲಿ ತೊಡಗಿದೆ' ಎಂದು ಆರೋಪಿಸಿ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದಿರಾ ಗಾಂಧಿ ವೃತ್ತದಲ್ಲಿ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ ನಡೆಯಿತು.</p>.<p>ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರು ಸಹಿ ಹಾಕುವ ಮೂಲಕ ಜನಜಾಗೃತಿ ಮತ್ತು ಸಹಿ ಸಂಗ್ರಹಕ್ಕೆ ಚಾಲನೆ ನೀಡಿದರು.</p>.<p>ಸೌಮ್ಯ ರೆಡ್ಡಿ ಮಾತನಾಡಿ, 'ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮತದಾನದ ಹಕ್ಕು ನೀಡಿದೆ, ಈ ಹಕ್ಕನ್ನು ವಂಚಿಸುವ ಕೆಲಸವಾಗುತ್ತಿದೆ. ಸಣ್ಣ ಮನೆಯಲ್ಲಿ 80ಕ್ಕೂ ಹೆಚ್ಚು ಮತದಾರರು ಇರುವುದು, ಒಬ್ಬ ವ್ಯಕ್ತಿಯ ಹೆಸರು ಹಲವು ಮತಗಟ್ಟೆಯಲ್ಲಿ ಇರುವುದು ಪತ್ತೆಯಾಗಿದೆ' ಎಂದರು.</p>.<p>'2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದ ಘಟನೆ ಇಡೀ ರಾಜ್ಯಕ್ಕೆ ಗೊತ್ತಿದೆ' ಎಂದ ಅವರು, 'ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕು ಇದೆ. ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ' ಎಂದರು.</p>.<p>ಅಭಿಷೇಕ್ ದತ್ತ ಅವರು ಮಾತನಾಡಿ, 'ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು, ಮತ ಕಳ್ಳತನ ವಿರುದ್ದ ರಾಹುಲ್ ಗಾಂಧಿ ಅವರು ದೇಶದಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿಯು ಷಡ್ಯಂತ್ರದಿಂದ ಮತ ಕಳ್ಳತನ ಮಾಡಿದೆ' ಎಂದು ದೂರಿದರು.</p>.<p>'ಮತದಾರ ಪಟ್ಟಿಯಿಂದ ತೆಗೆದು ಹಾಕಿದ ಮತ್ತು ಸೇರ್ಪಡೆ ಮಾಡಿದ ಪಟ್ಟಿಯನ್ನು ಚುನಾವಣೆ ಆಯೋಗ ನೀಡುತ್ತಿಲ್ಲ' ಎಂದರು.</p>.<p>ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಕೇಂದ್ರದ ಬಿಜೆಪಿ ಸರ್ಕಾರ ಮತ ಕಳ್ಳತನದಲ್ಲಿ ತೊಡಗಿದೆ' ಎಂದು ಆರೋಪಿಸಿ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದಿರಾ ಗಾಂಧಿ ವೃತ್ತದಲ್ಲಿ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ ನಡೆಯಿತು.</p>.<p>ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರು ಸಹಿ ಹಾಕುವ ಮೂಲಕ ಜನಜಾಗೃತಿ ಮತ್ತು ಸಹಿ ಸಂಗ್ರಹಕ್ಕೆ ಚಾಲನೆ ನೀಡಿದರು.</p>.<p>ಸೌಮ್ಯ ರೆಡ್ಡಿ ಮಾತನಾಡಿ, 'ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮತದಾನದ ಹಕ್ಕು ನೀಡಿದೆ, ಈ ಹಕ್ಕನ್ನು ವಂಚಿಸುವ ಕೆಲಸವಾಗುತ್ತಿದೆ. ಸಣ್ಣ ಮನೆಯಲ್ಲಿ 80ಕ್ಕೂ ಹೆಚ್ಚು ಮತದಾರರು ಇರುವುದು, ಒಬ್ಬ ವ್ಯಕ್ತಿಯ ಹೆಸರು ಹಲವು ಮತಗಟ್ಟೆಯಲ್ಲಿ ಇರುವುದು ಪತ್ತೆಯಾಗಿದೆ' ಎಂದರು.</p>.<p>'2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದ ಘಟನೆ ಇಡೀ ರಾಜ್ಯಕ್ಕೆ ಗೊತ್ತಿದೆ' ಎಂದ ಅವರು, 'ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕು ಇದೆ. ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ' ಎಂದರು.</p>.<p>ಅಭಿಷೇಕ್ ದತ್ತ ಅವರು ಮಾತನಾಡಿ, 'ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು, ಮತ ಕಳ್ಳತನ ವಿರುದ್ದ ರಾಹುಲ್ ಗಾಂಧಿ ಅವರು ದೇಶದಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿಯು ಷಡ್ಯಂತ್ರದಿಂದ ಮತ ಕಳ್ಳತನ ಮಾಡಿದೆ' ಎಂದು ದೂರಿದರು.</p>.<p>'ಮತದಾರ ಪಟ್ಟಿಯಿಂದ ತೆಗೆದು ಹಾಕಿದ ಮತ್ತು ಸೇರ್ಪಡೆ ಮಾಡಿದ ಪಟ್ಟಿಯನ್ನು ಚುನಾವಣೆ ಆಯೋಗ ನೀಡುತ್ತಿಲ್ಲ' ಎಂದರು.</p>.<p>ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>