<p><strong>ಬೆಂಗಳೂರು:</strong> 'ಆರ್ಎಸ್ಎಸ್ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ. ಈ ರೀತಿ ಹಿಂಬಾಗಿಲಿನಿಂದ ಆರ್ಎಸ್ಎಸ್ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಿ ನೋಡೋಣ' ಎಂದು ಸವಾಲು ಹಾಕಿದ್ದಾರೆ. </p><p>'ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ?' ಎಂದು ಅವರು ಪ್ರಶ್ನಿಸಿದ್ದಾರೆ. </p><p>'ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು' ಎಂಬ ರಾಜ್ಯ ಸರ್ಕಾರದ ಆದೇಶ ಅನುಷ್ಠಾನಕ್ಕೆ ಹೈಕೋರ್ಟ್ ತಡೆ ನೀಡಿತ್ತು. </p>.‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್ ಅಂಕುಶ.ಆರ್ಎಸ್ಎಸ್ ಜನಪ್ರಿಯತೆ ಸಹಿಸದ ಸಿ.ಎಂ ಸಿದ್ದರಾಮಯ್ಯ: ಸಂಸದ ಜಗದೀಶ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಆರ್ಎಸ್ಎಸ್ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ. ಈ ರೀತಿ ಹಿಂಬಾಗಿಲಿನಿಂದ ಆರ್ಎಸ್ಎಸ್ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಿ ನೋಡೋಣ' ಎಂದು ಸವಾಲು ಹಾಕಿದ್ದಾರೆ. </p><p>'ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ?' ಎಂದು ಅವರು ಪ್ರಶ್ನಿಸಿದ್ದಾರೆ. </p><p>'ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು' ಎಂಬ ರಾಜ್ಯ ಸರ್ಕಾರದ ಆದೇಶ ಅನುಷ್ಠಾನಕ್ಕೆ ಹೈಕೋರ್ಟ್ ತಡೆ ನೀಡಿತ್ತು. </p>.‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್ ಅಂಕುಶ.ಆರ್ಎಸ್ಎಸ್ ಜನಪ್ರಿಯತೆ ಸಹಿಸದ ಸಿ.ಎಂ ಸಿದ್ದರಾಮಯ್ಯ: ಸಂಸದ ಜಗದೀಶ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>