ಬರ ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್ನಲ್ಲಿಯೇ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಮನವಿಗೆ ಸ್ಪಂದಿಸದ ಕಾರಣ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ಕರ್ನಾಟಕ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.