<p><strong>ಬೆಂಗಳೂರು:</strong> ‘ಮತಕಳವು ವಿರುದ್ಧ ಇದೇ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದುಕೊಂಡು ಹೋಗಬೇಕಿದೆ. ಈ ಬಗ್ಗೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಬುಧವಾರ ಬೆಳಿಗ್ಗೆ ದೆಹಲಿಗೆ ಹೊರಡುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರಿಗೆ ವಾಸ್ತವ್ಯ ಕಲ್ಪಿಸಲು ಕೆಲವರಿಗೆ ಜವಾಬ್ದಾರಿ ವಹಿಸಬೇಕಾಗಿದೆ. ಈ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ’ ಎಂದರು. </p>.<p>‘ಮತಕಳವು ವಿರುದ್ಧದ ಹೋರಾಟದಲ್ಲಿ ಪ್ರತಿ ತಾಲ್ಲೂಕಿನಿಂದ ಕನಿಷ್ಠ 30 ಜನರನ್ನು, ಬೆಂಗಳೂರಿನಿಂದ ಹೆಚ್ಚು ಜನರನ್ನು ಕರೆದೊಯ್ಯಬೇಕು. ವ್ಯವಸ್ಥೆ ಮಾಡಿಕೊಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ’ ಎಂದರು.</p>.<p><strong>ಸರ್ವಪಕ್ಷ ಸಭೆ ವಿಪಕ್ಷ ಭಿನ್ನರಾಗ:</strong></p><p>‘ದೆಹಲಿಯಲ್ಲಿ ಇದೇ 8ರಂದು ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆ ಕೆಲವು ತಾಂತ್ರಿಕ ಕಾರಣಗಳಿಂದ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಸರಿಹೊಂದುವ ದಿನವನ್ನು ನಾನು ಮತ್ತು ಮುಖ್ಯಮಂತ್ರಿ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮತಕಳವು ವಿರುದ್ಧ ಇದೇ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದುಕೊಂಡು ಹೋಗಬೇಕಿದೆ. ಈ ಬಗ್ಗೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಬುಧವಾರ ಬೆಳಿಗ್ಗೆ ದೆಹಲಿಗೆ ಹೊರಡುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರಿಗೆ ವಾಸ್ತವ್ಯ ಕಲ್ಪಿಸಲು ಕೆಲವರಿಗೆ ಜವಾಬ್ದಾರಿ ವಹಿಸಬೇಕಾಗಿದೆ. ಈ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ’ ಎಂದರು. </p>.<p>‘ಮತಕಳವು ವಿರುದ್ಧದ ಹೋರಾಟದಲ್ಲಿ ಪ್ರತಿ ತಾಲ್ಲೂಕಿನಿಂದ ಕನಿಷ್ಠ 30 ಜನರನ್ನು, ಬೆಂಗಳೂರಿನಿಂದ ಹೆಚ್ಚು ಜನರನ್ನು ಕರೆದೊಯ್ಯಬೇಕು. ವ್ಯವಸ್ಥೆ ಮಾಡಿಕೊಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ’ ಎಂದರು.</p>.<p><strong>ಸರ್ವಪಕ್ಷ ಸಭೆ ವಿಪಕ್ಷ ಭಿನ್ನರಾಗ:</strong></p><p>‘ದೆಹಲಿಯಲ್ಲಿ ಇದೇ 8ರಂದು ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆ ಕೆಲವು ತಾಂತ್ರಿಕ ಕಾರಣಗಳಿಂದ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಸರಿಹೊಂದುವ ದಿನವನ್ನು ನಾನು ಮತ್ತು ಮುಖ್ಯಮಂತ್ರಿ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>