‘ರಾಜಕೀಯವಾಗಿ ತಮ್ಮ ಪಕ್ಷದ ಒಬ್ಬ ನಾಯಕ ಮಾತನಾಡುತ್ತಿದ್ದರೆ ಬಿಜೆಪಿ ನಾಯಕರು ಸುಮ್ಮನೆ ಕುಳಿತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ಈ ಬಗ್ಗೆ ಗಮನಹರಿಸಬೇಕು. ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆಂದು ಪ್ರಮಾಣ ವಚನ ಸ್ವೀಕರಿಸಿರುವ ಹೆಗಡೆ, ಅದನ್ನು ಮರೆತಿರುವುದು ಶೋಭೆ ತರುವಂಥದ್ದಲ್ಲ’ ಎಂದರು.