<p><strong>ಬೆಂಗಳೂರು:</strong> ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿತು.</p>.<p>ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಭಟನಾ ಸಭೆಗೆ ಸೈಕಲ್ ಏರಿ ಬಂದರು. ಬಳಿಕ ಮಾತನಾಡಿದ ನಾಯಕರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ದಾವಣಗೆರೆಯಲ್ಲಿ ಕಾರ್ಯಕರ್ತರು ಎತ್ತಿನಗಾಡಿಗೆ ಮೊರೆ ಹೋದರೆ, ಧಾರವಾಡದಲ್ಲಿ ಎಮ್ಮೆ ಮೆರವಣಿಗೆ ನಡೆಸಿದರು. ಮಂಗಳೂರಿನಲ್ಲಿ ಸೈಕಲ್ಗೆ ಸ್ಥಳೀಯ ಸಂಸದರ ಮುಖವಾಡವನ್ನು ಸಿಕ್ಕಿಸಿದ್ದರು.</p>.<p>ಹುಬ್ಬಳ್ಳಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚಕ್ಕಡಿ ಹಾಗೂ ಸೈಕಲ್ ಸವಾರಿ ಮಾಡಿದರು. ಮಾಜಿ ಸಚಿವ, 82 ವರ್ಷದ ಎ.ಎಂ. ಹಿಂಡಸಗೇರಿ, ಮಾಜಿ ಸಂಸದ, 82 ವರ್ಷದ ಐ.ಜಿ. ಸನದಿ ಅವರು ಸುಮಾರು ಒಂದು ಕಿ.ಮೀ. ಸೈಕಲ್ ತುಳಿದು ಪ್ರತಿಭಟಿಸಿದರು.</p>.<p>ಹಾವೇರಿ ಜಿಲ್ಲಾಕೇಂದ್ರ ಬಿಟ್ಟು ಉಳಿದೆಲ್ಲ ಜಿಲ್ಲೆಗಳಲ್ಲಿ ಸೈಕಲ್ ಏರಿ ಚಳವಳಿ ನಡೆಯಿತು. ಕಲಬುರ್ಗಿ ನಗರದಲ್ಲಿ ಶಾಸಕಿ ಖನೀಜ್ ಫಾತಿಮಾ ಟಾಂಗಾದಲ್ಲಿ ಸಂಚರಿಸಿ ಗಮನ ಸೆಳೆದರು.</p>.<p><strong>‘ಕೈ ನಾಯಕರ ವಿರುದ್ಧ ಎಫ್ಐಆರ್’</strong><br />ಪ್ರತಿಭಟನೆ ನಡೆಸಲು ಅನುಮತಿ ಪಡೆಯದ ಕಾರಣ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ಯಾವ ಕಾಯ್ದೆ ಮೇಲೆ, ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ ಎಂದರು.</p>.<p>ಈ ಮಧ್ಯೆ, ಪ್ರತಿಭಟನೆಯ ವಿಡಿಯೊ ಚಿತ್ರೀಕರಣ ಮಾಡಿರುವ ಪೊಲೀಸರು, ಈ ಬಗ್ಗೆ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿತು.</p>.<p>ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಭಟನಾ ಸಭೆಗೆ ಸೈಕಲ್ ಏರಿ ಬಂದರು. ಬಳಿಕ ಮಾತನಾಡಿದ ನಾಯಕರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ದಾವಣಗೆರೆಯಲ್ಲಿ ಕಾರ್ಯಕರ್ತರು ಎತ್ತಿನಗಾಡಿಗೆ ಮೊರೆ ಹೋದರೆ, ಧಾರವಾಡದಲ್ಲಿ ಎಮ್ಮೆ ಮೆರವಣಿಗೆ ನಡೆಸಿದರು. ಮಂಗಳೂರಿನಲ್ಲಿ ಸೈಕಲ್ಗೆ ಸ್ಥಳೀಯ ಸಂಸದರ ಮುಖವಾಡವನ್ನು ಸಿಕ್ಕಿಸಿದ್ದರು.</p>.<p>ಹುಬ್ಬಳ್ಳಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚಕ್ಕಡಿ ಹಾಗೂ ಸೈಕಲ್ ಸವಾರಿ ಮಾಡಿದರು. ಮಾಜಿ ಸಚಿವ, 82 ವರ್ಷದ ಎ.ಎಂ. ಹಿಂಡಸಗೇರಿ, ಮಾಜಿ ಸಂಸದ, 82 ವರ್ಷದ ಐ.ಜಿ. ಸನದಿ ಅವರು ಸುಮಾರು ಒಂದು ಕಿ.ಮೀ. ಸೈಕಲ್ ತುಳಿದು ಪ್ರತಿಭಟಿಸಿದರು.</p>.<p>ಹಾವೇರಿ ಜಿಲ್ಲಾಕೇಂದ್ರ ಬಿಟ್ಟು ಉಳಿದೆಲ್ಲ ಜಿಲ್ಲೆಗಳಲ್ಲಿ ಸೈಕಲ್ ಏರಿ ಚಳವಳಿ ನಡೆಯಿತು. ಕಲಬುರ್ಗಿ ನಗರದಲ್ಲಿ ಶಾಸಕಿ ಖನೀಜ್ ಫಾತಿಮಾ ಟಾಂಗಾದಲ್ಲಿ ಸಂಚರಿಸಿ ಗಮನ ಸೆಳೆದರು.</p>.<p><strong>‘ಕೈ ನಾಯಕರ ವಿರುದ್ಧ ಎಫ್ಐಆರ್’</strong><br />ಪ್ರತಿಭಟನೆ ನಡೆಸಲು ಅನುಮತಿ ಪಡೆಯದ ಕಾರಣ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ಯಾವ ಕಾಯ್ದೆ ಮೇಲೆ, ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ ಎಂದರು.</p>.<p>ಈ ಮಧ್ಯೆ, ಪ್ರತಿಭಟನೆಯ ವಿಡಿಯೊ ಚಿತ್ರೀಕರಣ ಮಾಡಿರುವ ಪೊಲೀಸರು, ಈ ಬಗ್ಗೆ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>