<p><strong>ರಾಮನಗರ</strong>: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ತೊರೆಯದೇ ಹೋದರೆ ಕಾಂಗ್ರೆಸ್ ನಿರ್ನಾಮ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಎಚ್ಚರಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಾತಿನುದ್ದಕ್ಕೂ ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಹಿಂದೆಂದೂ ಇಂತಹ ಹೀನಾಯ ಸ್ಥಿತಿಗೆ ತಲುಪಿರಲಿಲ್ಲ. ನಮ್ಮ ನಾಯಕರಿಗೆ ಇನ್ನಾದರೂ ಬುದ್ದಿ ಬರಬೇಕಿದೆ ಎಂದರು.</p>.<p>ಮೈತ್ರಿ ಸರ್ಕಾರದಿಂದಾಗಿ ಜೆಡಿಎಸ್ ಆರ್ಥಿಕವಾಗಿ ಸಧೃಡವಾಗಿದೆ. ಇದರಿಂದಾಗಿಯೇ ಅವರು ಈ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ 150 ಕೋಟಿ, ತುಮಕೂರಿನಲ್ಲಿ 80 ಹಾಗೂ ಹಾಸನದಲ್ಲಿ 60 ಕೋಟಿ ಹಣ ಖರ್ಚು ಮಾಡಲು ಸಾಧ್ಯವಾಯಿತು ಎಂದು ಲೇವಡಿ ಮಾಡಿದರು.</p>.<p>‘ನಮ್ಮಲ್ಲಿನ ಕೆಲವರಿಗೆ ಅಧಿಕಾರದ ಕುರ್ಚಿ ಬಿಡಲು ಇಷ್ಟ ಇಲ್ಲ,’ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.</p>.<p>‘37 ಸ್ಥಾನ ಹೊಂದಿದವರೇ ಮುಖ್ಯಮಂತ್ರಿ ಆಗಿರುವಾಗ 105 ಸ್ಥಾನ ಪಡೆದವರು ಸರ್ಕಾರ ರಚನೆಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿಲ್ಲ' ಎಂದೂ ಹೇಳಿದರು.</p>.<p><strong>ಸುಮಲತಾಗೆ ಅಭಿನಂದನೆ: </strong>ಮಂಡ್ಯದಲ್ಲಿ ಸುಮಲತಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಅವರು ‘ಕಾಂಗ್ರೆಸ್ ಕಾರ್ಯಕರ್ತರ ಧೃಡ ನಿರ್ಧಾರದಿಂದಾಗಿ ಈ ಗೆಲುವು ಸಾಧ್ಯವಾಯಿತು' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ತೊರೆಯದೇ ಹೋದರೆ ಕಾಂಗ್ರೆಸ್ ನಿರ್ನಾಮ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಎಚ್ಚರಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಾತಿನುದ್ದಕ್ಕೂ ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಹಿಂದೆಂದೂ ಇಂತಹ ಹೀನಾಯ ಸ್ಥಿತಿಗೆ ತಲುಪಿರಲಿಲ್ಲ. ನಮ್ಮ ನಾಯಕರಿಗೆ ಇನ್ನಾದರೂ ಬುದ್ದಿ ಬರಬೇಕಿದೆ ಎಂದರು.</p>.<p>ಮೈತ್ರಿ ಸರ್ಕಾರದಿಂದಾಗಿ ಜೆಡಿಎಸ್ ಆರ್ಥಿಕವಾಗಿ ಸಧೃಡವಾಗಿದೆ. ಇದರಿಂದಾಗಿಯೇ ಅವರು ಈ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ 150 ಕೋಟಿ, ತುಮಕೂರಿನಲ್ಲಿ 80 ಹಾಗೂ ಹಾಸನದಲ್ಲಿ 60 ಕೋಟಿ ಹಣ ಖರ್ಚು ಮಾಡಲು ಸಾಧ್ಯವಾಯಿತು ಎಂದು ಲೇವಡಿ ಮಾಡಿದರು.</p>.<p>‘ನಮ್ಮಲ್ಲಿನ ಕೆಲವರಿಗೆ ಅಧಿಕಾರದ ಕುರ್ಚಿ ಬಿಡಲು ಇಷ್ಟ ಇಲ್ಲ,’ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.</p>.<p>‘37 ಸ್ಥಾನ ಹೊಂದಿದವರೇ ಮುಖ್ಯಮಂತ್ರಿ ಆಗಿರುವಾಗ 105 ಸ್ಥಾನ ಪಡೆದವರು ಸರ್ಕಾರ ರಚನೆಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿಲ್ಲ' ಎಂದೂ ಹೇಳಿದರು.</p>.<p><strong>ಸುಮಲತಾಗೆ ಅಭಿನಂದನೆ: </strong>ಮಂಡ್ಯದಲ್ಲಿ ಸುಮಲತಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಅವರು ‘ಕಾಂಗ್ರೆಸ್ ಕಾರ್ಯಕರ್ತರ ಧೃಡ ನಿರ್ಧಾರದಿಂದಾಗಿ ಈ ಗೆಲುವು ಸಾಧ್ಯವಾಯಿತು' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>