‘ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ನಿಮ್ಮ ವಿರುದ್ಧ ಕಾಂಗ್ರೆಸ್ ಅಧ್ಯಕ್ಷರಿಗೆ ದೂರು ಸಲ್ಲಿಕೆಯಾಗಿದೆ. ಸಮಾವೇಶದಲ್ಲಿ ಬಿಜೆಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡು ಮುಖ್ಯಮಂತ್ರಿ ಅವರ ವಿರುದ್ಧ ಟೀಕೆ ನಡೆಸಿದ್ದೀರಿ ಎಂದು ದೂರಲಾಗಿದೆ. ಈ ಪ್ರಕರಣವನ್ನು ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.