<p><strong>ದಾವಣಗೆರೆ: </strong>ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋದರೆ ಹೋಗಲಿ. ಆ ಗಿರಾಕಿ ಹೊಗುತ್ತೆ ಎಂದು ಗೊತ್ತಿತ್ತು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ನಗರದ ಐಎಂಎ ಹಾಲ್ ಮತಗಟ್ಟೆ 110 ರಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.</p>.<p>ಯಾರುಹೋದರೂ ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಡಕೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ ವಿಚಾರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾರು ಬೇಕಾದರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಬಹುದು. ನಾನೂ ಹೇಳುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ದಾವಣಗೆರೆಯಲ್ಲಿ ಕಳೆದ ಚುನಾವಣೆಯಲ್ಲಿ ಇದ್ದ ವಾತಾವರಣಕ್ಕಿಂತ ಭಿನ್ನ ಪರಿಸ್ಥಿತಿ ಈಗ ಇದೆ. ಉತ್ತಮ ಮತದಾನವಾಗುತ್ತಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ 20 ಸ್ಥಾನಗಳುಮೈತ್ರಿ ಪಕ್ಷಗಳಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪುತ್ರರಾದ ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್, ಕುಟುಂಬದ ಸದಸ್ಯರಾದ ಪ್ರೀತಿ ಬಕ್ಕೇಶ್, ರೇಖಾ ಗಣೇಶ್ ಇತರರ ಜತೆಗೆ ಬಂದು ಶಾಮನೂರು ಶಿವಶಂಕರಪ್ಪ ಮತ ಚಲಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋದರೆ ಹೋಗಲಿ. ಆ ಗಿರಾಕಿ ಹೊಗುತ್ತೆ ಎಂದು ಗೊತ್ತಿತ್ತು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ನಗರದ ಐಎಂಎ ಹಾಲ್ ಮತಗಟ್ಟೆ 110 ರಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.</p>.<p>ಯಾರುಹೋದರೂ ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಡಕೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ ವಿಚಾರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾರು ಬೇಕಾದರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಬಹುದು. ನಾನೂ ಹೇಳುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ದಾವಣಗೆರೆಯಲ್ಲಿ ಕಳೆದ ಚುನಾವಣೆಯಲ್ಲಿ ಇದ್ದ ವಾತಾವರಣಕ್ಕಿಂತ ಭಿನ್ನ ಪರಿಸ್ಥಿತಿ ಈಗ ಇದೆ. ಉತ್ತಮ ಮತದಾನವಾಗುತ್ತಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ 20 ಸ್ಥಾನಗಳುಮೈತ್ರಿ ಪಕ್ಷಗಳಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪುತ್ರರಾದ ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್, ಕುಟುಂಬದ ಸದಸ್ಯರಾದ ಪ್ರೀತಿ ಬಕ್ಕೇಶ್, ರೇಖಾ ಗಣೇಶ್ ಇತರರ ಜತೆಗೆ ಬಂದು ಶಾಮನೂರು ಶಿವಶಂಕರಪ್ಪ ಮತ ಚಲಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>