ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಿಂದ ಜನ ಪರದಾಡುತ್ತಿದ್ದರೆ, ರಾಮನಗರ ಜಿಲ್ಲೆ ಕನಕಪುರದ ಸಂಗಮದಲ್ಲಿ ಕಾಂಗ್ರೆಸ್ ನಾಯಕರ ಆರ್ಭಟ ಜೋರಾಗಿತ್ತು. ಮೇಕೆದಾಟು ಯೋಜನೆಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.