<p><strong>ಬೆಂಗಳೂರು:</strong> ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತು ಮಾಡಲಾಗಿದೆ.</p>.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯ ಸಂದರ್ಭದಲ್ಲಿ ಜಬ್ಬಾರ್ ಅವರು ನಡೆಸಿದ ಪಕ್ಷ ವಿರೋಧಿ ಚಟುವಟಿಕೆ ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತು ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p>.<p>ಉಪ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಬ್ಬಾರ್, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರದಲ್ಲಿ ಭಾಗವಹಿಸದೆ ದೂರ ಉಳಿದಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಅದನ್ನು ಅಂಗೀಕರಿಸಿದ್ದ ಡಿ.ಕೆ. ಶಿವಕುಮಾರ್, ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ್ದರು.</p>.<p>ಅಮಾನತು ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಬ್ಬಾರ್, ‘ಚುನಾವಣೆಯ ಫಲಿತಾಂಶಕ್ಕೂ ಮೊದಲೇ ಯಾಕೆ ಈ ಕ್ರಮ ಎನ್ನುವುದೂ ಗೊತ್ತಿಲ್ಲ ಶಾಮನೂರು ಶಿವಶಂಕರಪ್ಪ ಅವರು ತೀರಿಕೊಂಡ ನಂತರ ನಾವೆಲ್ಲ, ಅವರ ಕುಟುಂಬಕ್ಕೇ ಯಾಕೆ ಟಿಕೆಟ್ ಕೊಡಬೇಕು? ಒಂದು ವೇಳೆ ಅಲ್ಪಸಂಖ್ಯಾತರಿಗೆ ಕೊಡಲಿಲ್ಲವೆಂದರೆ, ಬೇರೆ ಸಮುದಾಯಕ್ಕೆ ಕೊಡಿ ಎಂಬ ಒತ್ತಾಯವೂ ಇತ್ತು. ಕುರುಬರಿಗೆ ಕೊಡಿ, ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಹೇಳಿದ್ದೆವು’ ಎಂದರು.</p>.<h2><strong>‘ಪಕ್ಷ ವಿರೋಧಿ ಚಟುವಟಿಕೆಗೆ ದಾಖಲೆ ಕೊಡಿ’</strong></h2><p> ‘ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದಕ್ಕೆ ಯಾವುದಾದರೂ ಆಡಿಯೊ ವಿಡಿಯೊ ಸೇರಿದಂತೆ ಏನೇ ಸಾಕ್ಷ್ಯ ದಾಖಲೆ ಇದ್ದರೆ ತೋರಿಸಲಿ’ ಎಂದು ಅಬ್ದುಲ್ ಜಬ್ಬಾರ್ ಆಗ್ರಹಿಸಿದರು. ‘ಯಾರು ಹೇಳದಿದ್ದರೂ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆ. ಅಧ್ಯಕ್ಷರು ಯಾವುದು ಅಶಿಸ್ತು ಯಾರು ಕೆಲಸ ಮಾಡಿಲ್ಲವೆಂದು ಹೇಳಲಿ. ಮುಖ್ಯಮಂತ್ರಿ ಬಣದ ನಾಯಕರೇ ಗುರಿ ಎಂದೇನೂ ಇಲ್ಲ. ಇಲ್ಲಿ ಟಿಕೆಟ್ ಯಾರು ಕೊಟ್ಟರು? ಆವತ್ತು ಡಯಾಸ್ ಮೇಲೆ ನಿಂತು ಬಿಜೆಪಿ ಗೆಲ್ಲಿಸಿ ಎಂದವರ ಮೇಲೆ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದೂ ಪ್ರಶ್ನಿಸಿದರು. ‘ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ’ ಎಂದು ಸೂಚ್ಯವಾಗಿ ಹೇಳಿದರು. </p>.<h2>ನಸೀರ್ ಭೇಟಿಯಾದ ಜಮೀರ್ </h2><p>ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿರುವ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿ ಚರ್ಚೆ ನಡೆಸಿದರು. ನಸೀರ್ ಅವರ ಸರ್ಕಾರಿ ನಿವಾಸಕ್ಕೆ ಬುಧವಾರ ಬೆಳಿಗ್ಗೆ ತೆರಳಿದ ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಂಗಳವಾರ ರಾತ್ರಿ ನಡೆಸಿದ ಮಾತುಕತೆಯ ವಿವರವನ್ನು ಹಂಚಿಕೊಂಡಿದ್ದಾರೆ. ನಂತರ ಮಾತನಾಡಿದ ಜಮೀರ್ ‘ನಸೀರ್ ಅಹಮದ್ ಪಕ್ಷದಲ್ಲಿ ತುಂಬಾ ಹಿರಿಯರು. ಅವರನ್ನು ಹುದ್ದೆಯಿಂದ ವಜಾ ಮಾಡಿದ್ದರಿಂದ ನನಗೂ ಬಹಳ ನೋವಾಗಿದೆ. ಹೀಗಾಗಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತು ಮಾಡಲಾಗಿದೆ.</p>.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯ ಸಂದರ್ಭದಲ್ಲಿ ಜಬ್ಬಾರ್ ಅವರು ನಡೆಸಿದ ಪಕ್ಷ ವಿರೋಧಿ ಚಟುವಟಿಕೆ ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತು ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p>.<p>ಉಪ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಬ್ಬಾರ್, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರದಲ್ಲಿ ಭಾಗವಹಿಸದೆ ದೂರ ಉಳಿದಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಅದನ್ನು ಅಂಗೀಕರಿಸಿದ್ದ ಡಿ.ಕೆ. ಶಿವಕುಮಾರ್, ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ್ದರು.</p>.<p>ಅಮಾನತು ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಬ್ಬಾರ್, ‘ಚುನಾವಣೆಯ ಫಲಿತಾಂಶಕ್ಕೂ ಮೊದಲೇ ಯಾಕೆ ಈ ಕ್ರಮ ಎನ್ನುವುದೂ ಗೊತ್ತಿಲ್ಲ ಶಾಮನೂರು ಶಿವಶಂಕರಪ್ಪ ಅವರು ತೀರಿಕೊಂಡ ನಂತರ ನಾವೆಲ್ಲ, ಅವರ ಕುಟುಂಬಕ್ಕೇ ಯಾಕೆ ಟಿಕೆಟ್ ಕೊಡಬೇಕು? ಒಂದು ವೇಳೆ ಅಲ್ಪಸಂಖ್ಯಾತರಿಗೆ ಕೊಡಲಿಲ್ಲವೆಂದರೆ, ಬೇರೆ ಸಮುದಾಯಕ್ಕೆ ಕೊಡಿ ಎಂಬ ಒತ್ತಾಯವೂ ಇತ್ತು. ಕುರುಬರಿಗೆ ಕೊಡಿ, ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಹೇಳಿದ್ದೆವು’ ಎಂದರು.</p>.<h2><strong>‘ಪಕ್ಷ ವಿರೋಧಿ ಚಟುವಟಿಕೆಗೆ ದಾಖಲೆ ಕೊಡಿ’</strong></h2><p> ‘ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದಕ್ಕೆ ಯಾವುದಾದರೂ ಆಡಿಯೊ ವಿಡಿಯೊ ಸೇರಿದಂತೆ ಏನೇ ಸಾಕ್ಷ್ಯ ದಾಖಲೆ ಇದ್ದರೆ ತೋರಿಸಲಿ’ ಎಂದು ಅಬ್ದುಲ್ ಜಬ್ಬಾರ್ ಆಗ್ರಹಿಸಿದರು. ‘ಯಾರು ಹೇಳದಿದ್ದರೂ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆ. ಅಧ್ಯಕ್ಷರು ಯಾವುದು ಅಶಿಸ್ತು ಯಾರು ಕೆಲಸ ಮಾಡಿಲ್ಲವೆಂದು ಹೇಳಲಿ. ಮುಖ್ಯಮಂತ್ರಿ ಬಣದ ನಾಯಕರೇ ಗುರಿ ಎಂದೇನೂ ಇಲ್ಲ. ಇಲ್ಲಿ ಟಿಕೆಟ್ ಯಾರು ಕೊಟ್ಟರು? ಆವತ್ತು ಡಯಾಸ್ ಮೇಲೆ ನಿಂತು ಬಿಜೆಪಿ ಗೆಲ್ಲಿಸಿ ಎಂದವರ ಮೇಲೆ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದೂ ಪ್ರಶ್ನಿಸಿದರು. ‘ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ’ ಎಂದು ಸೂಚ್ಯವಾಗಿ ಹೇಳಿದರು. </p>.<h2>ನಸೀರ್ ಭೇಟಿಯಾದ ಜಮೀರ್ </h2><p>ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿರುವ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿ ಚರ್ಚೆ ನಡೆಸಿದರು. ನಸೀರ್ ಅವರ ಸರ್ಕಾರಿ ನಿವಾಸಕ್ಕೆ ಬುಧವಾರ ಬೆಳಿಗ್ಗೆ ತೆರಳಿದ ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಂಗಳವಾರ ರಾತ್ರಿ ನಡೆಸಿದ ಮಾತುಕತೆಯ ವಿವರವನ್ನು ಹಂಚಿಕೊಂಡಿದ್ದಾರೆ. ನಂತರ ಮಾತನಾಡಿದ ಜಮೀರ್ ‘ನಸೀರ್ ಅಹಮದ್ ಪಕ್ಷದಲ್ಲಿ ತುಂಬಾ ಹಿರಿಯರು. ಅವರನ್ನು ಹುದ್ದೆಯಿಂದ ವಜಾ ಮಾಡಿದ್ದರಿಂದ ನನಗೂ ಬಹಳ ನೋವಾಗಿದೆ. ಹೀಗಾಗಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>