<p><strong>ನವದೆಹಲಿ</strong>: ಯುಪಿಎ ಸರ್ಕಾರದ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾನೂನನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ ಕಾಂಗ್ರೆಸ್, 'ಮನರೇಗಾ ಬಚಾವೊ ಅಭಿಯಾನ'ವನ್ನು ಜನವರಿ 5ರಿಂದ ರಾಷ್ಟ್ರವ್ಯಾಪಿ ನಡೆಸುವುದಾಗಿ ಪ್ರಕಟಿಸಿದೆ. </p>.<p>ಕೇಂದ್ರ ಸರ್ಕಾರ ತಂದಿರುವ ಹೊಸ ಕಾನೂನು ಬಡವರಿಂದ ಹಣವನ್ನು ಕಿತ್ತುಕೊಂಡು ಅದಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಗುರಿ ಹೊಂದಿರುವುದರಿಂದ ಬಿಜೆಪಿಯು ಜನರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ. ನರೇಂದ್ರ ಮೋದಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮಾಡಿದ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಮಾದರಿಯಲ್ಲೇ ಈ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷ ಹೇಳಿದೆ. </p>.<p>ರಾಜ್ಯ, ಜಿಲ್ಲಾ, ಮಂಡಲ ಮತ್ತು ಗ್ರಾಮ ಮಟ್ಟದಲ್ಲಿ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳ ಮೂಲಕ ಪ್ರತಿಭಟನೆಗಳನ್ನು ನಡೆಸುವ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.</p>.<p>ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು, ಭಾರತದಲ್ಲಿ ಕ್ರಿಸ್ಮಸ್ ಸಮಯದಲ್ಲಿ ಕ್ರೈಸ್ತರ ಮೇಲಿನ ದಾಳಿಗಳು, ಪಕ್ಷದ ಸಾಂಸ್ಥಿಕ ಸಮಸ್ಯೆಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. </p>.<p>ರಾಹುಲ್ ಗಾಂಧಿ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಖರ್ಗೆ, ‘ಮನರೇಗಾ ರದ್ದು ಮಾಡಿದ್ದಕ್ಕೆ ಜನರು ಕೋಪಗೊಂಡಿದ್ದಾರೆ ಮತ್ತು ಸರ್ಕಾರವು ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಡವರನ್ನು ಹತ್ತಿಕ್ಕಲು ಹೊಸ ಕಾನೂನು ತರಲಾಗಿದೆ. ಇದರ ವಿರುದ್ಧ ಬೀದಿಗಳಲ್ಲಿ ಮತ್ತು ಸಂಸತ್ತಿನಲ್ಲಿ ಹೋರಾಟ ನಡೆಸಲಾಗುತ್ತದೆ’ ಎಂದರು. </p>.<p>ರಾಜ್ಯಗಳ ಆರ್ಥಿಕ ಸ್ವಾತಂತ್ರ್ಯ ಮೊಟಕುಗೊಳಿಸುವ ಮತ್ತು ಆಯ್ದ ಕೆಲವು ಕಾರ್ಪೊರೇಟ್ಗಳಿಗೆ ಲಾಭ ಮಾಡಿಕೊಡುವ ಮೂಲಕ ಅಧಿಕಾರ ಕೇಂದ್ರೀಕರಿಸುವ ಮೋದಿ ಸರ್ಕಾರದ ಹೊಸ ಹುನ್ನಾರ ಇದಾಗಿದೆ ಎಂದು ಖರ್ಗೆ ಕಿಡಿಕಾರಿದರು. </p>.<p>ಉದ್ಯೋಗ ಖಾತರಿ ಯೋಜನೆಯು ಕೇವಲ ಒಂದು ಯೋಜನೆಯಲ್ಲ, ಸಂವಿಧಾನವು ನೀಡಿದ 'ಕೆಲಸದ ಹಕ್ಕು’ ಎಂದು ಖರ್ಗೆ ಪ್ರತಿಪಾದಿಸಿದರು. </p>.<p>ಮೋದಿ ಸರ್ಕಾರವು ಮನರೇಗಾ ಕಾಯ್ದೆ ರದ್ದುಗೊಳಿಸಿ ಕೋಟ್ಯಂತರ ಬಡ ಮತ್ತು ದುರ್ಬಲ ಜನರನ್ನು ಅಸಹಾಯಕರನ್ನಾಗಿ ಮಾಡಿದೆ. ಬಡವರ ಬೆನ್ನಿಗೆ ಚೂರಿ ಹಾಕಿದೆ. ಮನರೇಗಾ ರದ್ದುಗೊಳಿಸಿರುವುದು ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಮಾಡಿದ ಅವಮಾನ ಎಂದು ಅವರು ಹೇಳಿದರು.</p>.<p><strong>‘ನೋಟು ರದ್ದತಿಯಂತೆಯೇ ವಿನಾಶಕಾರಿ ದಾಳಿ’</strong></p><p>ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟ ಅಥವಾ ರಾಜ್ಯಗಳೊಂದಿಗೆ ಸಮಾಲೋಚಿಸದೆ ಮತ್ತು ಈ ವಿಷಯವನ್ನು ಅಧ್ಯಯನ ಮಾಡದೆ ಮನರೇಗಾವನ್ನು ಒಬ್ಬಂಟಿಯಾಗಿ ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದು ಗ್ರಾಮೀಣ ಆರ್ಥಿಕತೆ ಹಾಳುಮಾಡುವ<br>ಪ್ರಜಾಪ್ರಭುತ್ವ ರಚನೆಯ ಮೇಲಿನ ದಾಳಿಯಾಗಿದೆ ಎಂದು ದೂಷಿಸಿದರು. </p><p>ಹೊಸ ಕಾಯ್ದೆಯು ದುರ್ಬಲ ವರ್ಗಗಳಿಗೆ, ಆದಿವಾಸಿಗಳಿಗೆ, ದಲಿತರಿಗೆ, ಒಬಿಸಿಗಳಿಗೆ, ಸಾಮಾನ್ಯ ವರ್ಗದ ಬಡವರು ಮತ್ತು ಅಲ್ಪಸಂಖ್ಯಾತರಿಗೆ ಅಪಾರ ನೋವನ್ನುಂಟು ಮಾಡುತ್ತದೆ ಮತ್ತು ಅದಾನಿಗೆ ಪೂರ್ಣ ಪ್ರಮಾಣದಲ್ಲಿ ಪ್ರಯೋಜನ ನೀಡಲಿದೆ ಎಂದು ಅವರು ಎಚ್ಚರಿಸಿದರು. ಬಡ ಜನರಿಂದ ಹಣ ತೆಗೆದುಕೊಂಡು ಅದಾನಿಯಂತಹ ಜನರಿಗೆ ಹಸ್ತಾಂತರಿಸುವುದು ಈ ಕಾಯ್ದೆಯ ಉದ್ದೇಶ ಎಂದರು. </p><p>‘ವಿಬಿ–ಜಿ ರಾಮ್ ಜಿ’ ಕಾಯ್ದೆಯು ರಾಜ್ಯಗಳ ಮೇಲೆ ದಾಳಿಯಾಗಿದೆ. ರಾಜ್ಯಕ್ಕೆ ಸೇರಿದ ಹಣವನ್ನು ಮತ್ತು ರಾಜ್ಯಕ್ಕೆ ಸೇರಿದ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಕೇಂದ್ರ ಕಸಿದುಕೊಂಡಿದೆ. ಇದು ಆ ರಾಜ್ಯಗಳ ಮೂಲಸೌಕರ್ಯದ ಮೇಲೆ ದಾಳಿಯಾಗಿದೆ. ಏಕೆಂದರೆ, ಮನರೇಗಾ ಯೋಜನೆ ಮೂಲಕ ಮೂಲಸೌಕರ್ಯ ನಿರ್ಮಿಸಲಾಗುತ್ತಿತ್ತು. ನೋಟು ರದ್ದತಿಯ ಮಾದರಿಯಲ್ಲೇಮೋದಿ ಅವರು ಏಕಾಂಗಿಯಾಗಿ ಮನರೇಗಾ ಕಾಯ್ದೆ ರದ್ದುಗೊಳಿಸಿ ದೇಶದ ಬಡ ಜನರ ಮೇಲೆ ವಿನಾಶಕಾರಿ ದಾಳಿ ಮಾಡಿದ್ದಾರೆ ಎಂದರು. </p><p>ಕಾಯ್ದೆ ವಿರುದ್ಧ ಕಾಂಗ್ರೆಸ್ ಹೋರಾಡುತ್ತದೆ ಮತ್ತು ಮೋದಿ ಕ್ರಮದ ವಿರುದ್ಧ ಇಡೀ ವಿರೋಧ ಪಕ್ಷವು ಒಗ್ಗೂಡುತ್ತದೆ ಎಂಬ ವಿಶ್ವಾಸವಿದೆ ಎಂದು ರಾಹುಲ್ ಹೇಳಿದರು.</p>.<p><strong>ರಾಜ್ಯಕ್ಕೆ ₹20,000 ಕೋಟಿ ಹೊರೆ</strong></p><p>‘ಹೊಸ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಕೆಲಸ ನೀಡಲಾಗುತ್ತದೆ. ಯಾವ ಭಾಗದಲ್ಲಿ ಕೆಲಸ ನೀಡಬೇಕು ಎನ್ನುವುದನ್ನು ಕೇಂದ್ರವೇ ನಿರ್ಧರಿಸುತ್ತದೆ. ಒಬ್ಬ ವ್ಯಕ್ತಿ ಉದ್ಯೋಗ ಖಾತರಿ ಕಾರ್ಡ್ ಹೊಂದಿದ್ದರೆ ಆತ ಎಲ್ಲಿ ಬೇಕಾದರೂ ಕೆಲಸ ಮಾಡುವ ಅವಕಾಶವಿತ್ತು.</p><p>ಈಗ ಈ ಅವಕಾಶವನ್ನು ಕಸಿದುಕೊಳ್ಳಲಾಗಿದೆ. ದೇಶದ ಎಲ್ಲ ರಾಜ್ಯಗಳ ಗ್ರಾಮೀಣ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಸಿದ ಹೋರಾಟದಂತೆ ಬೀದಿಗಿಳಿಯಲಿದ್ದಾರೆ’ ಎಂದರು.</p><p>‘ಕೇಂದ್ರ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆದಿದೆ ಎಂಬ ಅಂಶವನ್ನಷ್ಟೇ ಕಾಂಗ್ರೆಸ್ ವಿರೋಧ ಮಾಡುತ್ತಿಲ್ಲ. ಬಿಜೆಪಿ, ಆರ್ಎಸ್ಎಸ್ಗೆ ಗಾಂಧೀಜಿ ಮೇಲೆ ದ್ವೇಷ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆ ದ್ವೇಷವನ್ನು ಗ್ರಾಮೀಣ ಜನರ ಮೇಲೆ ತೀರಿಸಿಕೊಳ್ಳುತ್ತಿರುವುದೇಕೆ? ಬಿಜೆಪಿ, ಸಂಘ ಪರಿವಾರಕ್ಕೆ ನಾಥುರಾಮ್ ಗೋಡ್ಸೆ ಇಷ್ಟವಾದರೆ, ಉದ್ಯೋಗ ಖಾತರಿ ಯೋಜನೆಗೆ ‘ವಿಬಿ ಜಿ ರಾಮ್ ಜಿ’ ಬದಲು ‘ಜಿ ನಾಥುರಾಮ್ ಜಿ’ ಅಂತಲೇ ಹೆಸರಿಡಲಿ, ಆದರೆ ಜನರ ಬದುಕನ್ನು ಕಸಿದುಕೊಳ್ಳುವುದು ಬೇಡ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಯುಪಿಎ ಸರ್ಕಾರದ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾನೂನನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ ಕಾಂಗ್ರೆಸ್, 'ಮನರೇಗಾ ಬಚಾವೊ ಅಭಿಯಾನ'ವನ್ನು ಜನವರಿ 5ರಿಂದ ರಾಷ್ಟ್ರವ್ಯಾಪಿ ನಡೆಸುವುದಾಗಿ ಪ್ರಕಟಿಸಿದೆ. </p>.<p>ಕೇಂದ್ರ ಸರ್ಕಾರ ತಂದಿರುವ ಹೊಸ ಕಾನೂನು ಬಡವರಿಂದ ಹಣವನ್ನು ಕಿತ್ತುಕೊಂಡು ಅದಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಗುರಿ ಹೊಂದಿರುವುದರಿಂದ ಬಿಜೆಪಿಯು ಜನರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ. ನರೇಂದ್ರ ಮೋದಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮಾಡಿದ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಮಾದರಿಯಲ್ಲೇ ಈ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷ ಹೇಳಿದೆ. </p>.<p>ರಾಜ್ಯ, ಜಿಲ್ಲಾ, ಮಂಡಲ ಮತ್ತು ಗ್ರಾಮ ಮಟ್ಟದಲ್ಲಿ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳ ಮೂಲಕ ಪ್ರತಿಭಟನೆಗಳನ್ನು ನಡೆಸುವ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.</p>.<p>ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು, ಭಾರತದಲ್ಲಿ ಕ್ರಿಸ್ಮಸ್ ಸಮಯದಲ್ಲಿ ಕ್ರೈಸ್ತರ ಮೇಲಿನ ದಾಳಿಗಳು, ಪಕ್ಷದ ಸಾಂಸ್ಥಿಕ ಸಮಸ್ಯೆಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. </p>.<p>ರಾಹುಲ್ ಗಾಂಧಿ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಖರ್ಗೆ, ‘ಮನರೇಗಾ ರದ್ದು ಮಾಡಿದ್ದಕ್ಕೆ ಜನರು ಕೋಪಗೊಂಡಿದ್ದಾರೆ ಮತ್ತು ಸರ್ಕಾರವು ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಡವರನ್ನು ಹತ್ತಿಕ್ಕಲು ಹೊಸ ಕಾನೂನು ತರಲಾಗಿದೆ. ಇದರ ವಿರುದ್ಧ ಬೀದಿಗಳಲ್ಲಿ ಮತ್ತು ಸಂಸತ್ತಿನಲ್ಲಿ ಹೋರಾಟ ನಡೆಸಲಾಗುತ್ತದೆ’ ಎಂದರು. </p>.<p>ರಾಜ್ಯಗಳ ಆರ್ಥಿಕ ಸ್ವಾತಂತ್ರ್ಯ ಮೊಟಕುಗೊಳಿಸುವ ಮತ್ತು ಆಯ್ದ ಕೆಲವು ಕಾರ್ಪೊರೇಟ್ಗಳಿಗೆ ಲಾಭ ಮಾಡಿಕೊಡುವ ಮೂಲಕ ಅಧಿಕಾರ ಕೇಂದ್ರೀಕರಿಸುವ ಮೋದಿ ಸರ್ಕಾರದ ಹೊಸ ಹುನ್ನಾರ ಇದಾಗಿದೆ ಎಂದು ಖರ್ಗೆ ಕಿಡಿಕಾರಿದರು. </p>.<p>ಉದ್ಯೋಗ ಖಾತರಿ ಯೋಜನೆಯು ಕೇವಲ ಒಂದು ಯೋಜನೆಯಲ್ಲ, ಸಂವಿಧಾನವು ನೀಡಿದ 'ಕೆಲಸದ ಹಕ್ಕು’ ಎಂದು ಖರ್ಗೆ ಪ್ರತಿಪಾದಿಸಿದರು. </p>.<p>ಮೋದಿ ಸರ್ಕಾರವು ಮನರೇಗಾ ಕಾಯ್ದೆ ರದ್ದುಗೊಳಿಸಿ ಕೋಟ್ಯಂತರ ಬಡ ಮತ್ತು ದುರ್ಬಲ ಜನರನ್ನು ಅಸಹಾಯಕರನ್ನಾಗಿ ಮಾಡಿದೆ. ಬಡವರ ಬೆನ್ನಿಗೆ ಚೂರಿ ಹಾಕಿದೆ. ಮನರೇಗಾ ರದ್ದುಗೊಳಿಸಿರುವುದು ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಮಾಡಿದ ಅವಮಾನ ಎಂದು ಅವರು ಹೇಳಿದರು.</p>.<p><strong>‘ನೋಟು ರದ್ದತಿಯಂತೆಯೇ ವಿನಾಶಕಾರಿ ದಾಳಿ’</strong></p><p>ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟ ಅಥವಾ ರಾಜ್ಯಗಳೊಂದಿಗೆ ಸಮಾಲೋಚಿಸದೆ ಮತ್ತು ಈ ವಿಷಯವನ್ನು ಅಧ್ಯಯನ ಮಾಡದೆ ಮನರೇಗಾವನ್ನು ಒಬ್ಬಂಟಿಯಾಗಿ ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದು ಗ್ರಾಮೀಣ ಆರ್ಥಿಕತೆ ಹಾಳುಮಾಡುವ<br>ಪ್ರಜಾಪ್ರಭುತ್ವ ರಚನೆಯ ಮೇಲಿನ ದಾಳಿಯಾಗಿದೆ ಎಂದು ದೂಷಿಸಿದರು. </p><p>ಹೊಸ ಕಾಯ್ದೆಯು ದುರ್ಬಲ ವರ್ಗಗಳಿಗೆ, ಆದಿವಾಸಿಗಳಿಗೆ, ದಲಿತರಿಗೆ, ಒಬಿಸಿಗಳಿಗೆ, ಸಾಮಾನ್ಯ ವರ್ಗದ ಬಡವರು ಮತ್ತು ಅಲ್ಪಸಂಖ್ಯಾತರಿಗೆ ಅಪಾರ ನೋವನ್ನುಂಟು ಮಾಡುತ್ತದೆ ಮತ್ತು ಅದಾನಿಗೆ ಪೂರ್ಣ ಪ್ರಮಾಣದಲ್ಲಿ ಪ್ರಯೋಜನ ನೀಡಲಿದೆ ಎಂದು ಅವರು ಎಚ್ಚರಿಸಿದರು. ಬಡ ಜನರಿಂದ ಹಣ ತೆಗೆದುಕೊಂಡು ಅದಾನಿಯಂತಹ ಜನರಿಗೆ ಹಸ್ತಾಂತರಿಸುವುದು ಈ ಕಾಯ್ದೆಯ ಉದ್ದೇಶ ಎಂದರು. </p><p>‘ವಿಬಿ–ಜಿ ರಾಮ್ ಜಿ’ ಕಾಯ್ದೆಯು ರಾಜ್ಯಗಳ ಮೇಲೆ ದಾಳಿಯಾಗಿದೆ. ರಾಜ್ಯಕ್ಕೆ ಸೇರಿದ ಹಣವನ್ನು ಮತ್ತು ರಾಜ್ಯಕ್ಕೆ ಸೇರಿದ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಕೇಂದ್ರ ಕಸಿದುಕೊಂಡಿದೆ. ಇದು ಆ ರಾಜ್ಯಗಳ ಮೂಲಸೌಕರ್ಯದ ಮೇಲೆ ದಾಳಿಯಾಗಿದೆ. ಏಕೆಂದರೆ, ಮನರೇಗಾ ಯೋಜನೆ ಮೂಲಕ ಮೂಲಸೌಕರ್ಯ ನಿರ್ಮಿಸಲಾಗುತ್ತಿತ್ತು. ನೋಟು ರದ್ದತಿಯ ಮಾದರಿಯಲ್ಲೇಮೋದಿ ಅವರು ಏಕಾಂಗಿಯಾಗಿ ಮನರೇಗಾ ಕಾಯ್ದೆ ರದ್ದುಗೊಳಿಸಿ ದೇಶದ ಬಡ ಜನರ ಮೇಲೆ ವಿನಾಶಕಾರಿ ದಾಳಿ ಮಾಡಿದ್ದಾರೆ ಎಂದರು. </p><p>ಕಾಯ್ದೆ ವಿರುದ್ಧ ಕಾಂಗ್ರೆಸ್ ಹೋರಾಡುತ್ತದೆ ಮತ್ತು ಮೋದಿ ಕ್ರಮದ ವಿರುದ್ಧ ಇಡೀ ವಿರೋಧ ಪಕ್ಷವು ಒಗ್ಗೂಡುತ್ತದೆ ಎಂಬ ವಿಶ್ವಾಸವಿದೆ ಎಂದು ರಾಹುಲ್ ಹೇಳಿದರು.</p>.<p><strong>ರಾಜ್ಯಕ್ಕೆ ₹20,000 ಕೋಟಿ ಹೊರೆ</strong></p><p>‘ಹೊಸ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಕೆಲಸ ನೀಡಲಾಗುತ್ತದೆ. ಯಾವ ಭಾಗದಲ್ಲಿ ಕೆಲಸ ನೀಡಬೇಕು ಎನ್ನುವುದನ್ನು ಕೇಂದ್ರವೇ ನಿರ್ಧರಿಸುತ್ತದೆ. ಒಬ್ಬ ವ್ಯಕ್ತಿ ಉದ್ಯೋಗ ಖಾತರಿ ಕಾರ್ಡ್ ಹೊಂದಿದ್ದರೆ ಆತ ಎಲ್ಲಿ ಬೇಕಾದರೂ ಕೆಲಸ ಮಾಡುವ ಅವಕಾಶವಿತ್ತು.</p><p>ಈಗ ಈ ಅವಕಾಶವನ್ನು ಕಸಿದುಕೊಳ್ಳಲಾಗಿದೆ. ದೇಶದ ಎಲ್ಲ ರಾಜ್ಯಗಳ ಗ್ರಾಮೀಣ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಸಿದ ಹೋರಾಟದಂತೆ ಬೀದಿಗಿಳಿಯಲಿದ್ದಾರೆ’ ಎಂದರು.</p><p>‘ಕೇಂದ್ರ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆದಿದೆ ಎಂಬ ಅಂಶವನ್ನಷ್ಟೇ ಕಾಂಗ್ರೆಸ್ ವಿರೋಧ ಮಾಡುತ್ತಿಲ್ಲ. ಬಿಜೆಪಿ, ಆರ್ಎಸ್ಎಸ್ಗೆ ಗಾಂಧೀಜಿ ಮೇಲೆ ದ್ವೇಷ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆ ದ್ವೇಷವನ್ನು ಗ್ರಾಮೀಣ ಜನರ ಮೇಲೆ ತೀರಿಸಿಕೊಳ್ಳುತ್ತಿರುವುದೇಕೆ? ಬಿಜೆಪಿ, ಸಂಘ ಪರಿವಾರಕ್ಕೆ ನಾಥುರಾಮ್ ಗೋಡ್ಸೆ ಇಷ್ಟವಾದರೆ, ಉದ್ಯೋಗ ಖಾತರಿ ಯೋಜನೆಗೆ ‘ವಿಬಿ ಜಿ ರಾಮ್ ಜಿ’ ಬದಲು ‘ಜಿ ನಾಥುರಾಮ್ ಜಿ’ ಅಂತಲೇ ಹೆಸರಿಡಲಿ, ಆದರೆ ಜನರ ಬದುಕನ್ನು ಕಸಿದುಕೊಳ್ಳುವುದು ಬೇಡ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>