<p><strong>ಬೆಂಗಳೂರು</strong>: ರಾಜ್ಯ ಕಾಂಗ್ರೆಸ್ನಲ್ಲಿ ಯಾವ ಗೊಂದಲಗಳೂ ಇಲ್ಲ. ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ದೆಹಲಿಗೆ ತೆರಳುವ ಮುನ್ನ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಬಹುತೇಕ ನಾಯಕರು ಭೇಟಿ ಮಾಡಿದ್ದಾರೆ. ಎಲ್ಲವನ್ನೂ ಮಾಧ್ಯಮಗಳಿಗೆ ಹೇಳಿ ಮಾಡಬೇಕಾ ಎಂದು ಪ್ರಶ್ನಿಸಿದರು.</p>.<p>ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ದೆಹಲಿಯಲ್ಲಿ ಡಿ.27ರಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ವೀರಪ್ಪ ಮೊಯಿಲಿ, ಬಿ.ಕೆ.ಹರಿಪ್ರಸಾದ್ ಭಾಗವಹಿಸುತ್ತಿದ್ದಾರೆ. ಹಿಂದೆ ನಾನು ಸದಸ್ಯನಾಗಿದ್ದೆ. ಈಗ ಇಲ್ಲ. ಹಾಗಾಗಿ, ಆಹ್ವಾನ ಬಂದಿಲ್ಲ ಎಂದರು.</p>.<p>ವಿಜಯೇಂದ್ರ ಮಾತಿಗೆ ಪ್ರಿಯಾಂಕ್ ಟೀಕೆ: ರಾಜ್ಯದ ಜನರು ಕಾಂಗ್ರೆಸ್ಗೆ ಐದು ವರ್ಷಗಳು ಅಧಿಕಾರ ನೀಡಿದ್ದಾರೆ. ಬಿಜೆಪಿ ಬಯಸಿದ ತಕ್ಷಣ ಚುನಾವಣೆ ನಡೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಬಿಜೆಪಿ ಚುನಾವಣೆಯನ್ನು ಯಾರ ನಾಯಕತ್ವದಲ್ಲಿ ನಡೆಸುತ್ತದೆ? ಅವರಿಗೆ ಸದನದಲ್ಲಿ ನಿಳುವಳಿ ಸೂಚನೆ ಕುರಿತು ಅರ್ಧ ಗಂಟೆ ಮಾತನಾಡಲು ಬರುವುದಿಲ್ಲ. ಆಳಂದದಲ್ಲಿ ₹70, ₹80ಕ್ಕೆ ಮತಗಳವು ಮಾಡಿದ್ದರ ಬಗ್ಗೆ ಮೊದಲು ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.</p>.<p>‘ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿ ನಮ್ಮ ಸರ್ಕಾರದ ವೈಫಲ್ಯ ತೋರಿಸಬಹುದಿತ್ತು. ಸರ್ಕಾರದ ವಿರುದ್ಧ ಧ್ವನಿ ಎತ್ತಲೂ ಅವರಿಗೆ ಆಗಲಿಲ್ಲ. ಕರ್ನಾಟಕದಲ್ಲಿ ಇರುವುದು ದುರ್ಬಲ ವಿರೋಧ ಪಕ್ಷ, ಎರಡು ಅವಧಿಯಲ್ಲಿ ಐದು ಮುಖ್ಯಮಂತ್ರಿ ಕೊಟ್ಟ ಬಿಜೆಪಿಯಿಂದ ಹಿತವಚನ ಕೇಳಬೇಕಾ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಕಾಂಗ್ರೆಸ್ನಲ್ಲಿ ಯಾವ ಗೊಂದಲಗಳೂ ಇಲ್ಲ. ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ದೆಹಲಿಗೆ ತೆರಳುವ ಮುನ್ನ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಬಹುತೇಕ ನಾಯಕರು ಭೇಟಿ ಮಾಡಿದ್ದಾರೆ. ಎಲ್ಲವನ್ನೂ ಮಾಧ್ಯಮಗಳಿಗೆ ಹೇಳಿ ಮಾಡಬೇಕಾ ಎಂದು ಪ್ರಶ್ನಿಸಿದರು.</p>.<p>ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ದೆಹಲಿಯಲ್ಲಿ ಡಿ.27ರಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ವೀರಪ್ಪ ಮೊಯಿಲಿ, ಬಿ.ಕೆ.ಹರಿಪ್ರಸಾದ್ ಭಾಗವಹಿಸುತ್ತಿದ್ದಾರೆ. ಹಿಂದೆ ನಾನು ಸದಸ್ಯನಾಗಿದ್ದೆ. ಈಗ ಇಲ್ಲ. ಹಾಗಾಗಿ, ಆಹ್ವಾನ ಬಂದಿಲ್ಲ ಎಂದರು.</p>.<p>ವಿಜಯೇಂದ್ರ ಮಾತಿಗೆ ಪ್ರಿಯಾಂಕ್ ಟೀಕೆ: ರಾಜ್ಯದ ಜನರು ಕಾಂಗ್ರೆಸ್ಗೆ ಐದು ವರ್ಷಗಳು ಅಧಿಕಾರ ನೀಡಿದ್ದಾರೆ. ಬಿಜೆಪಿ ಬಯಸಿದ ತಕ್ಷಣ ಚುನಾವಣೆ ನಡೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಬಿಜೆಪಿ ಚುನಾವಣೆಯನ್ನು ಯಾರ ನಾಯಕತ್ವದಲ್ಲಿ ನಡೆಸುತ್ತದೆ? ಅವರಿಗೆ ಸದನದಲ್ಲಿ ನಿಳುವಳಿ ಸೂಚನೆ ಕುರಿತು ಅರ್ಧ ಗಂಟೆ ಮಾತನಾಡಲು ಬರುವುದಿಲ್ಲ. ಆಳಂದದಲ್ಲಿ ₹70, ₹80ಕ್ಕೆ ಮತಗಳವು ಮಾಡಿದ್ದರ ಬಗ್ಗೆ ಮೊದಲು ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.</p>.<p>‘ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿ ನಮ್ಮ ಸರ್ಕಾರದ ವೈಫಲ್ಯ ತೋರಿಸಬಹುದಿತ್ತು. ಸರ್ಕಾರದ ವಿರುದ್ಧ ಧ್ವನಿ ಎತ್ತಲೂ ಅವರಿಗೆ ಆಗಲಿಲ್ಲ. ಕರ್ನಾಟಕದಲ್ಲಿ ಇರುವುದು ದುರ್ಬಲ ವಿರೋಧ ಪಕ್ಷ, ಎರಡು ಅವಧಿಯಲ್ಲಿ ಐದು ಮುಖ್ಯಮಂತ್ರಿ ಕೊಟ್ಟ ಬಿಜೆಪಿಯಿಂದ ಹಿತವಚನ ಕೇಳಬೇಕಾ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>