‘ಪ್ರತಿ ಕ್ಷೇತ್ರದಲ್ಲೂ ಜನರ ಮಧ್ಯೆ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದೆ. ವರ್ತಕರು, ರೈತರು, ಕಾರ್ಮಿಕರು ಎಲ್ಲ ವರ್ಗಕ್ಕೂ ಅನ್ಯಾಯವಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಎಚ್ಚರಿಸಿ, ಅವರ ಧ್ವನಿಯನ್ನು ಕೇಂದ್ರ – ರಾಜ್ಯ ಸರ್ಕಾರಕ್ಕೆ ಮುಟ್ಟಿಸುತ್ತೇವೆ. ಎಲ್ಲ ನಗರಗಳ ಮುಖ್ಯರಸ್ತೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ’ ಎಂದರು.