<p>ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಾಗಿದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.</p>.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಿದ್ದು ಪಕ್ಷದ ಹೈಕಮಾಂಡ್ ತೀರ್ಮಾನ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಯಾರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರೂ ಅವರ ಮೇಲೆ ಕ್ರಮಕೈಗೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ಉಪ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪಕ್ಷದ ಅಭ್ಯರ್ಥಿ ಗೆದ್ದಿದ್ದು, ಮುಸ್ಲಿಂ ಸಮುದಾಯದ ಮತಗಳು ಪಲ್ಲಟವಾಗಿವೆ. ಈ ಬಗ್ಗೆಯೂ ಪಕ್ಷಮಟ್ಟದಲ್ಲಿ ತನಿಖೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ’ ಎಂದರು.</p>.<p>‘ದಾವಣಗೆರೆಯಲ್ಲಿ ಮತಯಂತ್ರಗಳ ಭದ್ರತಾ ಕೊಠಡಿಗಳ ಚಿಲಕ ಮುರಿದು ಬಾಗಿಲು ತೆರೆದಿದ್ದು ಅನುಮಾನಾಸ್ಪದವಾಗಿದೆ ಎಂದು ಎಸ್ಡಿಪಿಐ ನಾಯಕ ಅಫ್ಸರ್ ಕೊಡ್ಲಿಪೇಟೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಆ ಪಕ್ಷದ ಏಜೆಂಟ್ ಹಾಗೂ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಮಾಡಲಾಗಿದೆ’ ಎಂದರು.</p>.<p>‘ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ದೊಡ್ಡ ಷಡ್ಯಂತ್ರವೇ ನಡೆದಿದೆ. ಮತ ಪತ್ರಗಳನ್ನು ತಿದ್ದಲಾಗಿದೆ. ಬಿಜೆಪಿಯವರು ಮತಕಳ್ಳರು. ಗೆಲ್ಲುವ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಸೋತವರನ್ನು ಗೆಲ್ಲಿಸಿದ್ದಾರೆ’ ಎಂದು ಆರೋಪಿಸಿದರು.</p>.<p>‘ವಿನಯ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಯಾರು ಎಂದು ಹೈಕಮಾಂಡ್ ನಿರ್ಣಯಿಸಲಿದೆ’ ಎಂದರು.</p>.<p>ಸದಾನಂದ ವಿ.ಡಂಗನವರ, ಚಂದ್ರಶೇಖರ ಜುಟ್ಟಲ್, ಅಲ್ತಾಫ್ ಕಿತ್ತೂರ, ಬಸವರಾಜ, ಸುನಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-24-1776726129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಾಗಿದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.</p>.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಿದ್ದು ಪಕ್ಷದ ಹೈಕಮಾಂಡ್ ತೀರ್ಮಾನ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಯಾರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರೂ ಅವರ ಮೇಲೆ ಕ್ರಮಕೈಗೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ಉಪ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪಕ್ಷದ ಅಭ್ಯರ್ಥಿ ಗೆದ್ದಿದ್ದು, ಮುಸ್ಲಿಂ ಸಮುದಾಯದ ಮತಗಳು ಪಲ್ಲಟವಾಗಿವೆ. ಈ ಬಗ್ಗೆಯೂ ಪಕ್ಷಮಟ್ಟದಲ್ಲಿ ತನಿಖೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ’ ಎಂದರು.</p>.<p>‘ದಾವಣಗೆರೆಯಲ್ಲಿ ಮತಯಂತ್ರಗಳ ಭದ್ರತಾ ಕೊಠಡಿಗಳ ಚಿಲಕ ಮುರಿದು ಬಾಗಿಲು ತೆರೆದಿದ್ದು ಅನುಮಾನಾಸ್ಪದವಾಗಿದೆ ಎಂದು ಎಸ್ಡಿಪಿಐ ನಾಯಕ ಅಫ್ಸರ್ ಕೊಡ್ಲಿಪೇಟೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಆ ಪಕ್ಷದ ಏಜೆಂಟ್ ಹಾಗೂ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಮಾಡಲಾಗಿದೆ’ ಎಂದರು.</p>.<p>‘ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ದೊಡ್ಡ ಷಡ್ಯಂತ್ರವೇ ನಡೆದಿದೆ. ಮತ ಪತ್ರಗಳನ್ನು ತಿದ್ದಲಾಗಿದೆ. ಬಿಜೆಪಿಯವರು ಮತಕಳ್ಳರು. ಗೆಲ್ಲುವ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಸೋತವರನ್ನು ಗೆಲ್ಲಿಸಿದ್ದಾರೆ’ ಎಂದು ಆರೋಪಿಸಿದರು.</p>.<p>‘ವಿನಯ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಯಾರು ಎಂದು ಹೈಕಮಾಂಡ್ ನಿರ್ಣಯಿಸಲಿದೆ’ ಎಂದರು.</p>.<p>ಸದಾನಂದ ವಿ.ಡಂಗನವರ, ಚಂದ್ರಶೇಖರ ಜುಟ್ಟಲ್, ಅಲ್ತಾಫ್ ಕಿತ್ತೂರ, ಬಸವರಾಜ, ಸುನಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-24-1776726129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>