ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀವೇ ಗೆಲ್ತೀರಿ ಎಂದು ರಕ್ತದಲ್ಲಿ ಬರೆದುಕೊಟ್ಟ ಅಭಿಮಾನಿ: ಶೆಟ್ಟರ್‌ ಪ್ರತಿಕ್ರಿಯೆ ಇದು

Published 27 ಏಪ್ರಿಲ್ 2023, 15:44 IST
Last Updated 27 ಏಪ್ರಿಲ್ 2023, 15:44 IST
ಅಕ್ಷರ ಗಾತ್ರ

‌ಬೆಂಗಳೂರು: ಚುನಾವಣೆಯಲ್ಲಿ ‘ನೀವೇ ಗೆಲ್ತೀರಿ’ ಎಂದು ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ರಕ್ತದಲ್ಲಿ ಪತ್ರ ಬರೆದುಕೊಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಶೆಟ್ಟರ್‌, ‘ರಕ್ತದಾನ ಶ್ರೇಷ್ಠದಾನ. ಯಾರೂ ರಕ್ತವನ್ನು ವ್ಯರ್ಥ ಮಾಡಬೇಡಿ. ಅವಶ್ಯಕತೆ ಇರುವವರಿಗೆ ದಾನ ಮಾಡಿ...’ ಎಂದು ಸಲಹೆ ನೀಡಿದ್ದಾರೆ.

‘ಜಗದೀಶ್‌ ಶೆಟ್ಟರ್‌ ನೂರಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬರುತ್ತದೆ’ ಎಂದು ಮಂಜುನಾಥ ಯಂಟ್ರುವಿ ಎಂಬುವವರು ಜಗದೀಶ್ ಶೆಟ್ಟರ್‌ ಅವರಿಗೆ ಬರೆದುಕೊಟ್ಟಿದ್ದರು.

ಮಂಜುನಾಥ ಯಂಟ್ರುವಿ ಅವರನ್ನು ಇಂದು ಸನ್ಮಾನಿಸಿರುವ ಶೆಟ್ಟರ್‌, ಫೊಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಂತಹ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ಶಕ್ತಿಯೇ ನನ್ನ ಗೆಲುವಿಗೆ ಮುಖ್ಯ ಕಾರಣ ಎಂದು ಶೆಟ್ಟರ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT