‘ಆರೋಪಿ ಸಂತ್ರಸ್ತೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ನ್ಯಾಯಾಲಯದ ಆದೇಶವನ್ನೂ ಪಾಲಿಸಿಲ್ಲ. ವಾಸ್ತವ ಸಂಗತಿಗಳನ್ನು ಬಹು ಜಾಣ್ಮೆಯಿಂದ ಮುಚ್ಟಿಟ್ಟು ನ್ಯಾಯಾಲಯಗಳ ಹಾದಿ ತಪ್ಪಿಸಿದ್ದಾರೆ. ಇದು ಕಾನೂನಿನ ಸ್ಪಷ್ಟ ದುರುಪಯೋಗ. ಹಾಗಾಗಿ, ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಸಂತ್ರಸ್ತೆಯ ಪರ ಡಿ.ಮೋಹನಕುಮಾರ್ ಹಾಗೂ ಕೆ.ರಾಘವೇಂದ್ರ ಗೌಡ ವಾದ ಮಂಡಿಸಿದ್ದರು.