ಪಿಎಫ್ ಐ, ಎಸ್ ಡಿಪಿಐನ ಬಿಟೀಮ್ ಕಾಂಗ್ರೆಸ್. ಅವರ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ ಎಂದು ತಿರುಗೇಟು ನೀಡಿದರು.
ಪಿಎಫ್ಐ, ಎಸ್ ಡಿಪಿಐ ನಿಷೇಧಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಅವುಗಳ ಆಧಾರದಲ್ಲಿ ಈ ಸಂಘಟನೆಗಳನ್ನು ನಿ಼ಷೇಧಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ, ಗೃಹ ಸಚಿವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.