<p><strong>ಮಂಗಳೂರು:</strong> ಮೀಸಲಾತಿಗಾಗಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಸರ್ಕಾರ ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಿದೆ. ವೈಜ್ಞಾನಿಕ ಮತ್ತು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಶೇ 50 ಮೀರಬಾರದು ಎಂಬುದು ಸಂವಿಧಾನದ ಆಶಯವೂ ಆಗಿದೆ. ಅದಕ್ಕೆ ಅನುಗುಣವಾಗಿ, ಶೇ 50 ಪರಿಮಿತಿಯಲ್ಲಿ ಅರ್ಹ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲಾಗುವುದು ಎಂದರು.</p>.<p>ತಿರಸ್ಕರಿಸಿದರೂ ಬುದ್ಧಿ ಬಂದಿಲ್ಲ: ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಪುಣರು. ಕಾಂಗ್ರೆಸ್ ಗೆ ಸಮಾಜದ ಕಾಳಜಿ ಇಲ್ಲ. ಕೇವಲ ಒಲೈಕೆ ರಾಜಕಾರಣ ಮಾಡುತ್ತಿದೆ. ಜನರು ತಿರಸ್ಕಾರ ಮಾಡಿದ್ದರೂ ಇನ್ನೂ ಬುದ್ಧಿ ಬಂದಿಲ್ಲ ಎಂದು ಟೀಕಿಸಿದರು.</p>.<p>ಪಿಎಫ್ ಐ, ಎಸ್ ಡಿಪಿಐನ ಬಿಟೀಮ್ ಕಾಂಗ್ರೆಸ್. ಅವರ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ ಎಂದು ತಿರುಗೇಟು ನೀಡಿದರು.<br />ಪಿಎಫ್ಐ, ಎಸ್ ಡಿಪಿಐ ನಿಷೇಧಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಅವುಗಳ ಆಧಾರದಲ್ಲಿ ಈ ಸಂಘಟನೆಗಳನ್ನು ನಿ಼ಷೇಧಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ, ಗೃಹ ಸಚಿವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ನಿತ್ಯ ಪ್ರಯಾಣಿಕರಿಗೆ ತೊಂದರೆ ಬೇಡ:<br />ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯದ ಕುರಿತು ಪ್ರತಿಕ್ರಿಯಿಸಿದ ಅವರು, ನಿತ್ಯ ಬಂದು ಹೋಗುವವರಿಗೆ ತೊಂದರೆ ಆಗಬಾರದು. ಯಾರು ಇಲ್ಲಿಯೇ ಬಂದು ಉಳಿದುಕೊಳ್ಳುತ್ತಾರೋ ಅಂಥವರಿಗೆ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ಮಾಡಬೇಕು ಎಂದು ಡಾ.ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.</p>.<p>ಆರೋಗ್ಯ ಸೇತು ಅ್ಯಪ್ ಮೂಲಕ ಟ್ರ್ಯಾಕಿಂಗ್ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ ಜೊತೆಗೆ ಚರ್ಚಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮೀಸಲಾತಿಗಾಗಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಸರ್ಕಾರ ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಿದೆ. ವೈಜ್ಞಾನಿಕ ಮತ್ತು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಶೇ 50 ಮೀರಬಾರದು ಎಂಬುದು ಸಂವಿಧಾನದ ಆಶಯವೂ ಆಗಿದೆ. ಅದಕ್ಕೆ ಅನುಗುಣವಾಗಿ, ಶೇ 50 ಪರಿಮಿತಿಯಲ್ಲಿ ಅರ್ಹ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲಾಗುವುದು ಎಂದರು.</p>.<p>ತಿರಸ್ಕರಿಸಿದರೂ ಬುದ್ಧಿ ಬಂದಿಲ್ಲ: ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಪುಣರು. ಕಾಂಗ್ರೆಸ್ ಗೆ ಸಮಾಜದ ಕಾಳಜಿ ಇಲ್ಲ. ಕೇವಲ ಒಲೈಕೆ ರಾಜಕಾರಣ ಮಾಡುತ್ತಿದೆ. ಜನರು ತಿರಸ್ಕಾರ ಮಾಡಿದ್ದರೂ ಇನ್ನೂ ಬುದ್ಧಿ ಬಂದಿಲ್ಲ ಎಂದು ಟೀಕಿಸಿದರು.</p>.<p>ಪಿಎಫ್ ಐ, ಎಸ್ ಡಿಪಿಐನ ಬಿಟೀಮ್ ಕಾಂಗ್ರೆಸ್. ಅವರ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ ಎಂದು ತಿರುಗೇಟು ನೀಡಿದರು.<br />ಪಿಎಫ್ಐ, ಎಸ್ ಡಿಪಿಐ ನಿಷೇಧಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಅವುಗಳ ಆಧಾರದಲ್ಲಿ ಈ ಸಂಘಟನೆಗಳನ್ನು ನಿ಼ಷೇಧಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ, ಗೃಹ ಸಚಿವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ನಿತ್ಯ ಪ್ರಯಾಣಿಕರಿಗೆ ತೊಂದರೆ ಬೇಡ:<br />ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯದ ಕುರಿತು ಪ್ರತಿಕ್ರಿಯಿಸಿದ ಅವರು, ನಿತ್ಯ ಬಂದು ಹೋಗುವವರಿಗೆ ತೊಂದರೆ ಆಗಬಾರದು. ಯಾರು ಇಲ್ಲಿಯೇ ಬಂದು ಉಳಿದುಕೊಳ್ಳುತ್ತಾರೋ ಅಂಥವರಿಗೆ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ಮಾಡಬೇಕು ಎಂದು ಡಾ.ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.</p>.<p>ಆರೋಗ್ಯ ಸೇತು ಅ್ಯಪ್ ಮೂಲಕ ಟ್ರ್ಯಾಕಿಂಗ್ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ ಜೊತೆಗೆ ಚರ್ಚಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>