<p><strong>ಬೆಂಗಳೂರು</strong>: ಕಾರ್ಮಿಕರು, ಕೃಷಿಕರು, ಬಡವರಿಗೂ ಅನುಕೂಲವಾಗುವಂತೆ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ರೈಲ್ವೆ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ರೈಲ್ವೆ ಸಚಿವರು, ನಾನು ಬಗ್ಗೆ 2 ಗಂಟೆ ಚರ್ಚೆ ನಡೆಸಿದ್ದೇವೆ. ಅದರಲ್ಲಿ ರೈಲು ದರದ ಪರಿಷ್ಕರಣೆ ಮಾಡುವ ಚಿಂತನೆಯೂ ಸೇರಿತ್ತು. ಹಳ್ಳಿಗಳಿಂದ ಬರುವವರಿಗೂ ಉತ್ತಮ ಸೌಲಭ್ಯ ಇರುವ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬೇಕು ಎಂಬ ಆಸೆ ಇರುತ್ತದೆ. ಅದು ನೆರವೇರುವ ಕಾಲ ಬರಲಿದೆ’ ಎಂದರು.</p>.<p>1997–98ರಲ್ಲಿ ಮಂಜೂರಾಗಿ ನನೆಗುದಿಗೆ ಬಿದ್ದಿದ್ದ ಬೆಂಗಳೂರು–ವೈಟ್ಫೀಲ್ಡ್ ನಡುವಿನ 38 ಕಿ.ಮೀ. ಕ್ವಾಡ್ರುಪ್ಲಿಂಗ್ (ನಾಲ್ಕು ಪಥ) ಯೋಜನೆಯನ್ನು ಮತ್ತೆ ಕೈಗೆತ್ತಿಕೊಂಡು ಕಾಮಗಾರಿಗೆ ವೇಗ ನೀಡಲಾಗಿದೆ. ದಂಡು–ಬೈಯಪ್ಪನಹಳ್ಳಿ ನಡುವೆ ಕಾಮಗಾರಿ ನಡೆಯುತ್ತಿದೆ. ₹ 492 ಕೋಟಿ ವೆಚ್ಚದ ಈ ಯೋಜನೆ 2025ರ ಜೂನ್ ಒಳಗೆ ಪೂರ್ಣಗೊಳಿಸುವ ಗುರಿ ಇದೆ ಎಂದು ವಿವರಿಸಿದರು.</p>.<p>ಹೆಜ್ಜಾಲ–ಚಾಮರಾಜನಗರ ಡಿಪಿಆರ್: ಹೆಜ್ಜಾಲ–ಚಾಮರಾಜನಗರ ನಡುವೆ 142 ಕಿ.ಮೀ. ಹೊಸ ರೈಲು ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಎಲ್ಲಿಯೂ ಅರಣ್ಯ ಭೂಮಿ ಬರುವುದಿಲ್ಲ. ಒಟ್ಟು 692 ಎಕರೆ ಭೂಮಿ ಬೇಕಾಗಿದ್ದು, ರೈತರ ಜಮೀನುಗಳು ಮಧ್ಯೆ ಇವೆ. ಅವರಿಗೆ ಪರಿಹಾರ ನೀಡಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಶೀಘ್ರ ಸಿದ್ಧಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><blockquote>ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿ ನಿಧಾನವಾಗಿದೆ. ಇದಕ್ಕೆ ವೇಗ ನೀಡುವುದಕ್ಕಾಗಿ ರೈಲ್ವೆ ಸಚಿವರೇ ಪರಿಶೀಲನೆ ಮಾಡಿ ಸೂಚನೆ ನೀಡಲಿದ್ದಾರೆ.</blockquote><span class="attribution">–ವಿ. ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ</span></div>.<p>ತುಮಕೂರು–ಚಿತ್ರದುರ್ಗ–ದಾವಣಗೆರೆ ಕಾರಿಡಾರ್ ಕಾಮಗಾರಿ ಬಹಳ ನಿಧಾನವಾಗಿ ನಡೆಯುತ್ತಿದ್ದು, ಅದಕ್ಕೆ ವೇಗ ನೀಡಲಾಗುತ್ತಿದೆ. 2026ಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ಬಂಗಾರಪೇಟೆ, ದೊಡ್ಡಬಳ್ಳಾಪುರ, ಕೆಂಗೇರಿ, ವೈಟ್ಫೀಲ್ಡ್, ಚನ್ನಪಟ್ಟಣ, ಕೆ.ಆರ್.ಪುರ, ರಾಮನಗರ ನಿಲ್ದಾಣಗಳನ್ನು ‘ಅಮೃತ್ ಭಾರತ್’ ಯೋಜನೆಯಡಿ ಮೇಲ್ದರ್ಜೆಗೆ ಏರಿಸುವ ಕಾರ್ಯ ಸಾಗಿದೆ. ನಗರದ 8 ರೈಲ್ವೆ ಮೇಲ್ಸೇತುವೆ, 4 ರೈಲ್ವೆ ಕೆಳಸೇತುವೆ ನಿರ್ಮಾಣವಾಗಿದೆ ಎಂದು ವಿವರ ನೀಡಿದರು.</p>.<p><strong>ಕೇಂದ್ರದಿಂದಲೇ ಕಾಮಗಾರಿ</strong></p><p>ರಾಜ್ಯದಲ್ಲಿ ₹1699 ಕೋಟಿ ವೆಚ್ಚದ 93 ರೈಲ್ವೆ ಮೇಲ್ಸೇತುವೆ/ಕೆಳಸೇತುವೆಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ 49 ಕಾಮಗಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೆಚ್ಚ ಹಂಚಿಕೆ ಆಧಾರದಲ್ಲಿ ಅನುಮೋದನೆಯಾಗಿದ್ದವು. ಅದರಂತೆ ರೈಲ್ವೆ ಇಲಾಖೆಯ ಪಾಲು ₹850 ಕೋಟಿ ರಾಜ್ಯದ ಪಾಲು ₹849 ಕೋಟಿ ಆಗಿತ್ತು. ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಉಳಿದ ಎಲ್ಲ ಕಾಮಗಾರಿಗಳ ವೆಚ್ಚವನ್ನು ರೈಲ್ವೆ ಇಲಾಖೆಯೇ ಭರಿಸಲು ನಿರ್ಧರಿಸಿದೆ. ಅದರಂತೆ 49 ಕಾಮಗಾರಿಗಳ ಪೈಕಿ 32 ಕಾಮಗಾರಿಗಳಿಗೆ ರಾಜ್ಯ ಸರ್ಕಾರದ ಹಂಚಿಕೆ ಒಪ್ಪಂದವನ್ನು ಹಿಂಪಡೆಯಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. </p><p>ಬೆಂಗಳೂರು ನಗರ ರೈಲ್ವೆ ಸಂಪರ್ಕ ಉತ್ತಮಗೊಳಿಸಲು ಸುಮಾರು ₹43 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಬೆಟ್ಟಹಲಸೂರು–ರಾಜಾನುಕುಂಟೆ ಹೊಸ ಮಾರ್ಗ ವೈಟ್ಫೀಲ್ಡ್–ಬಂಗಾರಪೇಟೆ ಕ್ವಾಡ್ರುಪ್ಲಿಂಗ್ ಬೈಯಪ್ಪನಹಳ್ಳಿ–ಹೊಸೂರು ಕ್ವಾಡ್ರುಪ್ಲಿಂಗ್ ಯಲಹಂಕ–ದೇವನಹಳ್ಳಿ ದ್ವಿಪಥ ಬೆಂಗಳೂರು–ತುಮಕೂರು ಕ್ವಾಡ್ರುಪ್ಲಿಂಗ್ ಚಿಕ್ಕಬಾಣಾವರ–ಹಾಸನ ಕ್ವಾಡ್ರುಪ್ಲಿಂಗ್ ಬೆಂಗಳೂರು–ಮೈಸೂರು ಕ್ವಾಡ್ರುಪ್ಲಿಂಗ್ ದೇವನಹಳ್ಳಿ–ಬಂಗಾರಪೇಟೆ ಡಬಲಿಂಗ್ ಸರ್ವೆಗಳು ನಡೆಯುತ್ತಿವೆ ಎಂದರು.</p>.<p><strong>ವರ್ತುಲ ರೈಲು ಯೋಜನೆ ಡಿಪಿಆರ್ ಪ್ರಗತಿಯಲ್ಲಿ</strong></p><p>ಮುಂದಿನ ಹಲವು ದಶಕಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರಕ್ಕೆ 287 ಕಿ.ಮೀ. ಉದ್ದದ ವರ್ತುಲ ರೈಲ್ವೆ (ಸರ್ಕ್ಯುಲರ್ ರೈಲ್ ನೆಟ್ವರ್ಕ್) ವ್ಯವಸ್ಥೆಗೆ ನೀಲನಕ್ಷೆ ರೂಪಿಸಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.</p><p>ನಿಡುವಂದ–ವಡ್ಡರಹಳ್ಳಿ–ದೇವನಹಳ್ಳಿ–ಮಾಲೂರು–ಹೀಲಲಿಗೆ–ಹೆಜ್ಜಾಲ–ಸೋಲೂರು–ನಿಡುವಂದ ಸಂಪರ್ಕಿಸುವ ಈ ಯೋಜನೆಗೆ ₹23 ಸಾವಿರ ಕೋಟಿ ವೆಚ್ಚ ತಗಲುವ ನಿರೀಕ್ಷೆ ಇದ್ದು ಡಿಪಿಆರ್ ಪ್ರಗತಿಯಲ್ಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರ್ಮಿಕರು, ಕೃಷಿಕರು, ಬಡವರಿಗೂ ಅನುಕೂಲವಾಗುವಂತೆ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ರೈಲ್ವೆ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ರೈಲ್ವೆ ಸಚಿವರು, ನಾನು ಬಗ್ಗೆ 2 ಗಂಟೆ ಚರ್ಚೆ ನಡೆಸಿದ್ದೇವೆ. ಅದರಲ್ಲಿ ರೈಲು ದರದ ಪರಿಷ್ಕರಣೆ ಮಾಡುವ ಚಿಂತನೆಯೂ ಸೇರಿತ್ತು. ಹಳ್ಳಿಗಳಿಂದ ಬರುವವರಿಗೂ ಉತ್ತಮ ಸೌಲಭ್ಯ ಇರುವ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬೇಕು ಎಂಬ ಆಸೆ ಇರುತ್ತದೆ. ಅದು ನೆರವೇರುವ ಕಾಲ ಬರಲಿದೆ’ ಎಂದರು.</p>.<p>1997–98ರಲ್ಲಿ ಮಂಜೂರಾಗಿ ನನೆಗುದಿಗೆ ಬಿದ್ದಿದ್ದ ಬೆಂಗಳೂರು–ವೈಟ್ಫೀಲ್ಡ್ ನಡುವಿನ 38 ಕಿ.ಮೀ. ಕ್ವಾಡ್ರುಪ್ಲಿಂಗ್ (ನಾಲ್ಕು ಪಥ) ಯೋಜನೆಯನ್ನು ಮತ್ತೆ ಕೈಗೆತ್ತಿಕೊಂಡು ಕಾಮಗಾರಿಗೆ ವೇಗ ನೀಡಲಾಗಿದೆ. ದಂಡು–ಬೈಯಪ್ಪನಹಳ್ಳಿ ನಡುವೆ ಕಾಮಗಾರಿ ನಡೆಯುತ್ತಿದೆ. ₹ 492 ಕೋಟಿ ವೆಚ್ಚದ ಈ ಯೋಜನೆ 2025ರ ಜೂನ್ ಒಳಗೆ ಪೂರ್ಣಗೊಳಿಸುವ ಗುರಿ ಇದೆ ಎಂದು ವಿವರಿಸಿದರು.</p>.<p>ಹೆಜ್ಜಾಲ–ಚಾಮರಾಜನಗರ ಡಿಪಿಆರ್: ಹೆಜ್ಜಾಲ–ಚಾಮರಾಜನಗರ ನಡುವೆ 142 ಕಿ.ಮೀ. ಹೊಸ ರೈಲು ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಎಲ್ಲಿಯೂ ಅರಣ್ಯ ಭೂಮಿ ಬರುವುದಿಲ್ಲ. ಒಟ್ಟು 692 ಎಕರೆ ಭೂಮಿ ಬೇಕಾಗಿದ್ದು, ರೈತರ ಜಮೀನುಗಳು ಮಧ್ಯೆ ಇವೆ. ಅವರಿಗೆ ಪರಿಹಾರ ನೀಡಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಶೀಘ್ರ ಸಿದ್ಧಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><blockquote>ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿ ನಿಧಾನವಾಗಿದೆ. ಇದಕ್ಕೆ ವೇಗ ನೀಡುವುದಕ್ಕಾಗಿ ರೈಲ್ವೆ ಸಚಿವರೇ ಪರಿಶೀಲನೆ ಮಾಡಿ ಸೂಚನೆ ನೀಡಲಿದ್ದಾರೆ.</blockquote><span class="attribution">–ವಿ. ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ</span></div>.<p>ತುಮಕೂರು–ಚಿತ್ರದುರ್ಗ–ದಾವಣಗೆರೆ ಕಾರಿಡಾರ್ ಕಾಮಗಾರಿ ಬಹಳ ನಿಧಾನವಾಗಿ ನಡೆಯುತ್ತಿದ್ದು, ಅದಕ್ಕೆ ವೇಗ ನೀಡಲಾಗುತ್ತಿದೆ. 2026ಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ಬಂಗಾರಪೇಟೆ, ದೊಡ್ಡಬಳ್ಳಾಪುರ, ಕೆಂಗೇರಿ, ವೈಟ್ಫೀಲ್ಡ್, ಚನ್ನಪಟ್ಟಣ, ಕೆ.ಆರ್.ಪುರ, ರಾಮನಗರ ನಿಲ್ದಾಣಗಳನ್ನು ‘ಅಮೃತ್ ಭಾರತ್’ ಯೋಜನೆಯಡಿ ಮೇಲ್ದರ್ಜೆಗೆ ಏರಿಸುವ ಕಾರ್ಯ ಸಾಗಿದೆ. ನಗರದ 8 ರೈಲ್ವೆ ಮೇಲ್ಸೇತುವೆ, 4 ರೈಲ್ವೆ ಕೆಳಸೇತುವೆ ನಿರ್ಮಾಣವಾಗಿದೆ ಎಂದು ವಿವರ ನೀಡಿದರು.</p>.<p><strong>ಕೇಂದ್ರದಿಂದಲೇ ಕಾಮಗಾರಿ</strong></p><p>ರಾಜ್ಯದಲ್ಲಿ ₹1699 ಕೋಟಿ ವೆಚ್ಚದ 93 ರೈಲ್ವೆ ಮೇಲ್ಸೇತುವೆ/ಕೆಳಸೇತುವೆಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ 49 ಕಾಮಗಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೆಚ್ಚ ಹಂಚಿಕೆ ಆಧಾರದಲ್ಲಿ ಅನುಮೋದನೆಯಾಗಿದ್ದವು. ಅದರಂತೆ ರೈಲ್ವೆ ಇಲಾಖೆಯ ಪಾಲು ₹850 ಕೋಟಿ ರಾಜ್ಯದ ಪಾಲು ₹849 ಕೋಟಿ ಆಗಿತ್ತು. ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಉಳಿದ ಎಲ್ಲ ಕಾಮಗಾರಿಗಳ ವೆಚ್ಚವನ್ನು ರೈಲ್ವೆ ಇಲಾಖೆಯೇ ಭರಿಸಲು ನಿರ್ಧರಿಸಿದೆ. ಅದರಂತೆ 49 ಕಾಮಗಾರಿಗಳ ಪೈಕಿ 32 ಕಾಮಗಾರಿಗಳಿಗೆ ರಾಜ್ಯ ಸರ್ಕಾರದ ಹಂಚಿಕೆ ಒಪ್ಪಂದವನ್ನು ಹಿಂಪಡೆಯಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. </p><p>ಬೆಂಗಳೂರು ನಗರ ರೈಲ್ವೆ ಸಂಪರ್ಕ ಉತ್ತಮಗೊಳಿಸಲು ಸುಮಾರು ₹43 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಬೆಟ್ಟಹಲಸೂರು–ರಾಜಾನುಕುಂಟೆ ಹೊಸ ಮಾರ್ಗ ವೈಟ್ಫೀಲ್ಡ್–ಬಂಗಾರಪೇಟೆ ಕ್ವಾಡ್ರುಪ್ಲಿಂಗ್ ಬೈಯಪ್ಪನಹಳ್ಳಿ–ಹೊಸೂರು ಕ್ವಾಡ್ರುಪ್ಲಿಂಗ್ ಯಲಹಂಕ–ದೇವನಹಳ್ಳಿ ದ್ವಿಪಥ ಬೆಂಗಳೂರು–ತುಮಕೂರು ಕ್ವಾಡ್ರುಪ್ಲಿಂಗ್ ಚಿಕ್ಕಬಾಣಾವರ–ಹಾಸನ ಕ್ವಾಡ್ರುಪ್ಲಿಂಗ್ ಬೆಂಗಳೂರು–ಮೈಸೂರು ಕ್ವಾಡ್ರುಪ್ಲಿಂಗ್ ದೇವನಹಳ್ಳಿ–ಬಂಗಾರಪೇಟೆ ಡಬಲಿಂಗ್ ಸರ್ವೆಗಳು ನಡೆಯುತ್ತಿವೆ ಎಂದರು.</p>.<p><strong>ವರ್ತುಲ ರೈಲು ಯೋಜನೆ ಡಿಪಿಆರ್ ಪ್ರಗತಿಯಲ್ಲಿ</strong></p><p>ಮುಂದಿನ ಹಲವು ದಶಕಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರಕ್ಕೆ 287 ಕಿ.ಮೀ. ಉದ್ದದ ವರ್ತುಲ ರೈಲ್ವೆ (ಸರ್ಕ್ಯುಲರ್ ರೈಲ್ ನೆಟ್ವರ್ಕ್) ವ್ಯವಸ್ಥೆಗೆ ನೀಲನಕ್ಷೆ ರೂಪಿಸಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.</p><p>ನಿಡುವಂದ–ವಡ್ಡರಹಳ್ಳಿ–ದೇವನಹಳ್ಳಿ–ಮಾಲೂರು–ಹೀಲಲಿಗೆ–ಹೆಜ್ಜಾಲ–ಸೋಲೂರು–ನಿಡುವಂದ ಸಂಪರ್ಕಿಸುವ ಈ ಯೋಜನೆಗೆ ₹23 ಸಾವಿರ ಕೋಟಿ ವೆಚ್ಚ ತಗಲುವ ನಿರೀಕ್ಷೆ ಇದ್ದು ಡಿಪಿಆರ್ ಪ್ರಗತಿಯಲ್ಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>