ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ವೈದ್ಯೆಯು ಬೇಷರತ್ ಕ್ಷಮಾಪಣೆ ಕೋರುವ ಮೂಲಕ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡುವಂತೆ ಮುಚ್ಚಳಿಕೆಯ ಪ್ರಮಾಣ ಪತ್ರ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವೈದ್ಯೆಯ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟಿದೆ.