<p><strong>ಬೆಂಗಳೂರು</strong>: ‘ಗ್ರಾಮೀಣ ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯುವ ಉದ್ದೇಶದಿಂದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ದೇಶದ ಗ್ರಾಮೀಣ ಪ್ರದೇಶವು ಸಹಕಾರ ಕ್ಷೇತ್ರದಿಂದಲೇ ಗಟ್ಟಿಗೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಅವರು ಚಾಲನೆ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಯಾವುದೇ ಗ್ರಾಮವು ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಕಲ್ಪನೆಯಾಗಿತ್ತು. ಆ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದಲೇ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು’ ಎಂದು ಹೇಳಿದರು.</p>.<p>‘ಏಷ್ಯಾದಲ್ಲಿಯೇ ಮೊದಲ ಬಾರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಯಾಗಿದ್ದು ಕರ್ನಾಟಕದಲ್ಲಿ. ಹೀಗಾಗಿಯೇ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ, ತೊಟ್ಟಿಲು ಎಂದೆಲ್ಲಾ ಕರೆಯುತ್ತಾರೆ. ರಾಜ್ಯದ ಹಾಲು ಮಹಾಮಂಡಳಿಗಳ ಮೂಲಕ ಪ್ರತಿದಿನ ಒಂದು ಕೋಟಿ ಲೀಟರ್ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ವಾರ್ಷಿಕ ₹25,000 ಕೋಟಿ ವಹಿವಾಟು ನಡೆಸುತ್ತಿವೆ. ಇದು, ರಾಜ್ಯದಲ್ಲಿ ಸಹಕಾರ ತತ್ವ ಪರಿಣಾಮಕಾರಿ ಅನುಷ್ಠಾನಕ್ಕೆ ಉತ್ತಮ ನಿದರ್ಶನ’ ಎಂದರು.</p>.<p><strong>ಪುತ್ಥಳಿ ಅನಾವರಣ</strong>: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಸ್ಥಾಪಿಸಲಾಗಿರುವ ಸಹಕಾರ ಕ್ಷೇತ್ರದ ಧುರೀಣ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅನಾವರಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗ್ರಾಮೀಣ ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯುವ ಉದ್ದೇಶದಿಂದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ದೇಶದ ಗ್ರಾಮೀಣ ಪ್ರದೇಶವು ಸಹಕಾರ ಕ್ಷೇತ್ರದಿಂದಲೇ ಗಟ್ಟಿಗೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಅವರು ಚಾಲನೆ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಯಾವುದೇ ಗ್ರಾಮವು ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಕಲ್ಪನೆಯಾಗಿತ್ತು. ಆ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದಲೇ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು’ ಎಂದು ಹೇಳಿದರು.</p>.<p>‘ಏಷ್ಯಾದಲ್ಲಿಯೇ ಮೊದಲ ಬಾರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಯಾಗಿದ್ದು ಕರ್ನಾಟಕದಲ್ಲಿ. ಹೀಗಾಗಿಯೇ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ, ತೊಟ್ಟಿಲು ಎಂದೆಲ್ಲಾ ಕರೆಯುತ್ತಾರೆ. ರಾಜ್ಯದ ಹಾಲು ಮಹಾಮಂಡಳಿಗಳ ಮೂಲಕ ಪ್ರತಿದಿನ ಒಂದು ಕೋಟಿ ಲೀಟರ್ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ವಾರ್ಷಿಕ ₹25,000 ಕೋಟಿ ವಹಿವಾಟು ನಡೆಸುತ್ತಿವೆ. ಇದು, ರಾಜ್ಯದಲ್ಲಿ ಸಹಕಾರ ತತ್ವ ಪರಿಣಾಮಕಾರಿ ಅನುಷ್ಠಾನಕ್ಕೆ ಉತ್ತಮ ನಿದರ್ಶನ’ ಎಂದರು.</p>.<p><strong>ಪುತ್ಥಳಿ ಅನಾವರಣ</strong>: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಸ್ಥಾಪಿಸಲಾಗಿರುವ ಸಹಕಾರ ಕ್ಷೇತ್ರದ ಧುರೀಣ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅನಾವರಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>