ಈ ಬಗ್ಗೆ ಮಾತನಾಡಿದ ಮಾಲ್ದಾರೆ ಜನಪರ ಸಂಘದ ಅಧ್ಯಕ್ಷ ಆಂಟೋನಿ, ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಡುತ್ತಿದ್ದು, ಬೆಳೆಗಳನ್ನು ನಾಶಪಡಿಸುತ್ತಿದೆ. ಮತ್ತೊಂದೆಡೆ ಕಾರ್ಮಿಕರು ಕೂಡ ಭಯದಲ್ಲೇ ಕೆಲಸಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದ್ದು, ಅರಣ್ಯ ಇಲಾಖೆ ಕಾಡಾನೆಗಳ ಉಪಟಳವನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.