<p><strong>ಕಲಬುರ್ಗಿ</strong>: ಕೊರೊನಾ ಹಾವಳಿ ಮಧ್ಯೆಯೂ ರಾಜ್ಯದಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಶಾಲೆಗಳ ನಿರ್ಮಾಣ ಹಾಗೂ ವಸತಿನಿಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸೇಡಂ ಪಟ್ಟಣದಲ್ಲಿ ₹ 122 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದಾದ್ಯಂತ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 47 ವಸತಿ ಶಾಲೆಗಳ ಕಟ್ಟಡ ಪೂರ್ಣಗೊಂಡಿದೆ. 181 ವಸತಿಶಾಲೆಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಇದರಿಂದಾಗಿ ಬಡವರ ಮಕ್ಕಳಿಗೂ ಶಿಕ್ಷಣ ಸಿಗುತ್ತಿದ್ದು, ಇಲಾಖೆಯ ವಸತಿ ಶಾಲೆಗಳಲ್ಲಿ ಓದಿದ ಮಕ್ಕಳ ಫಲಿತಾಂಶ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ರಾಜ್ಯದ ಸರಾಸರಿಗಿಂತಲೂ ಉತ್ತಮವಾಗಿದೆ ಎಂದರು.</p>.<p>ಕಳೆದ ಬಾರಿ ನೆರೆ ಸಂಭವಿಸಿದಾಗ ಲೋಕೋಪಯೋಗಿ ಇಲಾಖೆಯ ₹ 8 ಸಾವಿರ ಕೋಟಿ ಮೊತ್ತದ ರಸ್ತೆ, ಸೇತುವೆಗಳಿಗೆ ಹಾನಿಯಾಗಿತ್ತು. ಈಗಲೂ ₹ 2700 ಕೋಟಿ ಮೊತ್ತದ ಆಸ್ತಿ ಹಾನಿಯಾಗಿದೆ. ಇನ್ನೂ ಸರ್ವೆ ಕಾರ್ಯ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಕೊರೊನಾ ಹಾವಳಿ ಮಧ್ಯೆಯೂ ರಾಜ್ಯದಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಶಾಲೆಗಳ ನಿರ್ಮಾಣ ಹಾಗೂ ವಸತಿನಿಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸೇಡಂ ಪಟ್ಟಣದಲ್ಲಿ ₹ 122 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದಾದ್ಯಂತ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 47 ವಸತಿ ಶಾಲೆಗಳ ಕಟ್ಟಡ ಪೂರ್ಣಗೊಂಡಿದೆ. 181 ವಸತಿಶಾಲೆಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಇದರಿಂದಾಗಿ ಬಡವರ ಮಕ್ಕಳಿಗೂ ಶಿಕ್ಷಣ ಸಿಗುತ್ತಿದ್ದು, ಇಲಾಖೆಯ ವಸತಿ ಶಾಲೆಗಳಲ್ಲಿ ಓದಿದ ಮಕ್ಕಳ ಫಲಿತಾಂಶ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ರಾಜ್ಯದ ಸರಾಸರಿಗಿಂತಲೂ ಉತ್ತಮವಾಗಿದೆ ಎಂದರು.</p>.<p>ಕಳೆದ ಬಾರಿ ನೆರೆ ಸಂಭವಿಸಿದಾಗ ಲೋಕೋಪಯೋಗಿ ಇಲಾಖೆಯ ₹ 8 ಸಾವಿರ ಕೋಟಿ ಮೊತ್ತದ ರಸ್ತೆ, ಸೇತುವೆಗಳಿಗೆ ಹಾನಿಯಾಗಿತ್ತು. ಈಗಲೂ ₹ 2700 ಕೋಟಿ ಮೊತ್ತದ ಆಸ್ತಿ ಹಾನಿಯಾಗಿದೆ. ಇನ್ನೂ ಸರ್ವೆ ಕಾರ್ಯ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>